Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಮಾಲ್ ಮಾಡುತ್ತಿದೆ ನವೀನ್ ಸಜ್ಜು ಹಾಡಿದ 'ಊರ್ವಶಿ ಅವಳು...' ಹಾಡು.!
ಎಂ.ಸಿರಿ.ಪ್ರೊಡಕ್ಷನ್ಸ್ ಬ್ಯಾನರ್ ಅಡಿ, ಡಾ.ಮಂಜುನಾಥ್ ಡಿ.ಎಸ್ ನಿರ್ಮಾಣ ಮಾಡಿರುವ ನೂತನ ಚಿತ್ರ 'ಕೆಮಿಸ್ಟ್ರಿ ಆಫ್ ಕರಿಯಪ್ಪ' ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ 'ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು... ಶ್ರೀಮತಿ ಆಗು ಅಂದ್ರೆ ಮೂತಿ ತಿರುವಿ ಹೋದ್ಲು' ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.
ಆರವ್ ರಿಶಿಕ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ನವೀನ್ ಸಜ್ಜು ದನಿಗೂಡಿಸಿದ್ದಾರೆ. 'ಎಣ್ಣೆ ನಮ್ದು ಊಟ ನಿಮ್ದು...' ಹಾಡಿನ ಬಳಿಕ 'ಬಿಗ್ ಬಾಸ್' ನವೀನ್ 'ಊರ್ವಶಿ...' ಹಾಡಿಗೆ ದನಿಯಾಗಿದ್ದಾರೆ. ಈ ಹಾಡಿಗೆ ನಿರ್ದೇಶಕ ಕುಮಾರ್ ಅವರೇ ಸಾಹಿತ್ಯ ರಚಿಸಿದ್ದಾರೆ.
ಆನಂದ್ ಆಡಿಯೋ ಸಂಸ್ಥೆ ಚಿತ್ರದ ಲಿರಿಕಲ್ ಆಡಿಯೋವನ್ನು ಬಿಡುಗಡೆ ಮಾಡಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಲವ್ ಪ್ಯಾಥೋ ಸಾಂಗ್ ಇದಾಗಿದ್ದು, ಟಪ್ಪಾಂಗುಚ್ಚಿ ಶೈಲಿಯಲ್ಲಿ ಮೂಡಿ ಬಂದಿದೆ.
ಸಾವಿನ ಮನೆಯಲ್ಲಿ ಹಾಡುತ್ತಿದ್ದ ನವೀನ್ 'ಬಿಗ್ ಬಾಸ್'ಗೆ ಬಂದ ಕಥೆ
ಯುವ ನಿರ್ದೇಶಕ ಕುಮಾರ್ ನಿರ್ದೇಶನವಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ 'ಕಿರಿಕ್ ಪಾರ್ಟಿ' ಚಂದನ್ ಆಚಾರ್, ಯುವ ನಾಯಕಿ ಸಂಜನಾ ಆನಂದ್, ತಬಲ ನಾಣಿ, ಸುಚೇಂದ್ರ ಪ್ರಸಾದ್ ಹಾಗೂ ನಿರ್ಮಾಪಕರಾದ ಡಾ.ಮಂಜುನಾಥ್ ಡಿ.ಎಸ್, ಮೈಕೋ ನಾಗರಾಜ್, ರಾಕ್'ಲೈನ್ ಸುಧಾಕರ್ ತಾರಾಬಳಗದಲ್ಲಿದ್ದಾರೆ.
ನವೀನ್ ಅಭಿನಯ ಕಂಡು ಖುಷಿ ಪಟ್ಟು ಚಪ್ಪಾಳೆ ತಟ್ಟಿದ ಸುದೀಪ್.!
ಮೊದಲ ಹಾಡಿನಿಂದಲೇ ಸದ್ದು ಮಾಡಿರುವ 'ಕೆಮಿಸ್ಟ್ರಿ ಆಫ್ ಕರಿಯಪ್ಪ' ಟ್ರೇಲರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡುವ ಆಲೋಚನೆಯಲ್ಲಿದೆ ಚಿತ್ರತಂಡ.
ಸಜಯ್ ಕುಮಾರ್ ಹಿನ್ನೆಲೆ ಸಂಗೀತ ನೀಡಿರುವ ಈ ಚಿತ್ರಕ್ಕೆ ಶಿವ ಸೇನಾ ಛಾಯಾಗ್ರಹಣ, ವೆಂಕಿ ಸಂಕಲನ ಮತ್ತು ಲಕ್ಷ್ಮಿತ್ ವಿನಯ್ ನೃತ್ಯ ನಿರ್ದೇಶನ ಮಾಡಿದ್ದಾರೆ.