Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಅಂಬರೀಶ' ಹಾಡಿಗೆ ರು.80 ಲಕ್ಷ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಮತ್ತೊಂದು ಅದ್ದೂರಿ ಚಿತ್ರ 'ಅಂಬರೀಶ'. ಈ ಚಿತ್ರಕ್ಕೆ ಅದ್ದೂರಿ ಹಾಡನ್ನು ಇತ್ತೀಚೆಗೆ ಬೆಂಗಳೂರಿನ ಬಂಗಾರಪ್ಪ ನಗರದಲ್ಲಿ ಚಿತ್ರೀಕರಿಸಲಾಯಿತು. ಈ ಹಾಡಿನಲ್ಲಿ 100 ಜನ ಸಹ ನರ್ತಕಿಯರು 500 ಜನ ಸಹಕಲಾವಿದರು ಪಾಲ್ಗೊಂಡಿದ್ದದ್ದು ವಿಶೇಷ.
ಇನ್ನೂ ವಿಶೇಷ ಎಂದರೆ ಈ ಹಾಡಿಗಾಗಿ 25 ಲಾರಿಗಳು, 25 ಜೆ.ಸಿ.ಬಿ. ಸ್ಟಡಿಕಾಂ, ಜಿಮ್ಮಿ ಜಿಪ್, ಅಲೆಕ್ಸಾ ಜೊತೆಗೆ 10 ಕ್ಯಾಮೆರಾಗಳನ್ನು ಬಳಸಿ ಕಲೈ ನೃತ್ಯ ನಿರ್ದೇಶನದೊಂದಿಗೆ ಸತ್ಯ ಛಾಯಾಗ್ರಹಣದಲ್ಲಿ ನಿರ್ದೇಶಕ ಮಹೇಶ್ ಸುಖಧರೆ ಚಿತ್ರಿಸಿಕೊಂಡರು.
ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅತಿಥಿ ಪಾತ್ರ ಪೋಷಿಸುತ್ತಿದ್ದಾರೆ. ಈಗಾಗಲೆ ಅವರ ಪಾತ್ರದ ಫೋಟೋ ಶೂಟ್ ಸಹ ಸದ್ದಿಲ್ಲದಂತೆ ಮುಗಿದಿದೆ. ಚಿತ್ರದಲ್ಲಿ ಅಂಬರೀಶ್ ಅವರು ಕೆಂಪೇಗೌಡ ಗೆಟಪ್ ನಲ್ಲಿ ದರ್ಶನ ನೀಡುತ್ತಿರುವುದು ವಿಶೇಷ.
ತಾರಾಗಣದಲ್ಲಿ ದರ್ಶನ್, ಪ್ರಿಯಾಮಣಿ, ಡಾ.ಅಂಬರೀಶ್, ಸುಮಲತಾ, ಉಮಾಶ್ರೀ, ಸಾಧುಕೋಕಿಲ, ಶರತ್ ಲೋಹಿತಾಶ್ವ, ರವಿಕಾಳೆ, ಬುಲೆಟ್ ಪ್ರಕಾಶ್, ರವಿಶಂಕರ್, ರಾಜೇಂದ್ರ ಕಾರಂತ್, ಸಿದ್ಧಾರ್ಥ (ಬಾಂಬೆ), ಬಿರಾದಾರ್, ರೋಹಿತ್, ಭರತ್, ಸತೀಶ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)