Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾಗೆ ಸಾಥ್ ಕೊಟ್ಟ ಸತೀಶ್ ನೀನಾಸಂ!
ಕನ್ನಡ ಚಿತ್ರರಂಗದ ಇತ್ತೀಚೆಗೆ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ಅದರಲ್ಲೂ ಸಿನಿಮಾದ ಟೈಟಲ್ಗಳು ಪ್ರೇಕ್ಷಕರನ್ನು ಸೆಳೆಯುತ್ತಿವೆ. ಇತ್ತೀಚೆಗೆ 'ಧರಣಿ ಮಂಡಲ ಮಧ್ಯದೊಳಗೆ' ಅನ್ನೋ ಅಪ್ಪಟ ಕನ್ನಡ ಚಿತ್ರದ ಶೀರ್ಷಿಕೆ ಸಿನಿಪ್ರಿಯರನ್ನು ಸೆಲೆಯುತ್ತಿದೆ.
'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾ ಸದ್ಯ ರಿಲೀಸ್ಗೆ ರೆಡಿಯಾಗಿದೆ. ನಿಧಾನವಾಗಿ ಈ ಸಿನಿಮಾ ಪ್ರಚಾರ ಆರಂಭಿಸಿದೆ. ಕ್ರಿಯೇಟಿವ್ ಆಗಿ ಪ್ರಮೋಷನ್ ಮಾಡುವುದಕ್ಕೆ ತುದಿಗಾಲಲ್ಲಿ ನಿಂತಿದೆ. ಈ ಕಾರಣಕ್ಕೆ ಇತ್ತೀಚೆಗೊಂದು ಹೊಸ ವೀಡಿಯೋ ಸಾಂಗ್ ಅನ್ನು ಬಿಡುಗಡೆ ಮಾಡುವ ಮೂಲಕ ಗಮನ ಸೆಳೆಯುತ್ತಿದೆ.
ಹೊಚ್ಚ ಹೊಸ ರಿಯಾಲಿಟಿ ಶೋ ನಡೆಸಿಕೊಡಲು ಮುಂದಾದ ಜೀ ಕನ್ನಡ ವಾಹಿನಿ
ಈ ಸಿನಿಮಾ ಹಾಡೊಂದಕ್ಕೆ ಸ್ಯಾಂಡಲ್ವುಡ್ ಅಧ್ಯಕ್ಷ ಶರಣ್ ಹಾಗೂ ಸಂಗೀತ ನಿರ್ದೇಶಕ ಹಾಗೂ ಗಾಯಕ ವಾಸುಕಿ ವೈಭವ್ ಹಾಡಿದ್ದಾರೆ. "ವಾಟರ್ ಮೇಲೆ ವಾಕಿಂಗ್ ಹೊಂಟವ್ನೆ.." ಅನ್ನೋ ಪೆಪ್ಪಿ ಸಾಂಗ್ ರಿಲೀಸ್ ಆಗಿದೆ. ವಿಶೇಷ ಅಂದರೆ, ಈ ಸಾಂಗ್ ಅನ್ನು ನಟ ನೀನಾಸಂ ಸತೀಶ್ ರಿಲೀಸ್ ಮಾಡಿದ್ದಾರೆ.
ಈ ಹಾಡಿನಲ್ಲಿ ಓಂಕಾರ್, ಜಯಶ್ರೀ ಆರಾಧ್ಯ ಸೇರಿದಂತೆ ಸಿದ್ದು ಮೂಲಿಮನಿ ಅಂತಹ ಕಲಾವಿದರು ಕಾಣಿಸಿಕೊಂಡಿದ್ದಾರೆ. ಚಿತ್ರತಂಡದ ಪ್ರಕಾರ ಈ ಹಾಡು ಪಡ್ಡೆ ಹುಡುಗರಿಗೆ ಸಿಕ್ಕಾಪಟ್ಟೆ ಇಷ್ಟ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನುತ್ತಿದೆ. ಫ್ರೆಶ್ ಟ್ಯೂನ್ ಎನಿಸೋ ಈ ಹಾಡು ಹೊಸತನದಿಂದ ಕೂಡಿದೆ.
ಕೆಲವು ದಿನಗಳ ಹಿಂದೆ 'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾ ಹಾಡೊಂದನ್ನು ರಿಲೀಸ್ ಮಾಡಲಾಗಿತ್ತು. ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದರು. 'ಮಾತು ಮಾತಲ್ಲೇ' ಅನ್ನೋ ಹಾಡಿನ ಲಿರಿಕಲ್ ವಿಡಿಯೋ ರಿಲೀಸ್ ಆಗಿ ಸಿನಿಪ್ರಿಯರ ಮನಗೆದ್ದಿತ್ತು.
ಈಗ ಇದೇ ಸಿನಿಮಾದ ಎರಡನೇ ಸಾಂಗ್ ಕೂಡ ರಿಲೀಸ್ ಆಗಿದೆ. ಅಂದ್ಹಾಗೆ 'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾ ವ್ಯಕ್ತಿ, ವ್ಯಕ್ತಿತ್ವ, ಸಂಬಂಧ ಹಾಗೂ ಸಂದರ್ಭಗಳ ಜೊತೆ ನಡೆಯುವ ಸಂಘರ್ಷ. ಕ್ರೈಂ, ಥ್ರಿಲ್ಲರ್, ಡ್ರಾಮಾ ಹೀಗಾಗಿ ಎಲ್ಲಾ ತರಹದ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟ ಆಗಲಿದೆ. ಪೂರಿ ಜಗನ್ನಾಥ್ ಜೊತೆ ಕೆಲಸ ಮಾಡಿ ಅನುಭವ ಇರುವ ಶ್ರೀಧರ್ ಶಿಕಾರಿಪುರ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.
'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾದಲ್ಲಿ 'ಗುಳ್ಟು' ಖ್ಯಾತಿಯ ನವೀನ್ ಶಂಕರ್, ಐಶಾನಿ ಶೆಟ್ಟಿ ಲೀಡ್ ರೋಲ್ನಲ್ಲಿ ನಟಿಸಿದ್ದು, ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ನಟಿಸಿದ್ದಾರೆ.