Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾರಕಾಸುರನಿಗೆ ಭರ್ಜರಿ ಚೇತನ್ ಸಾಥ್
ಟೈಟಲ್ ನಿಂದಲೇ ಕುತೂಹಲವನ್ನು ಮೂಡಿಸಿದ ಚಿತ್ರ 'ತಾರಕಾಸುರ'. ಸಿನಿಮಾ ಚಿತ್ರೀಕರಣ ಹಂತದಲ್ಲಿ ಇರುವಾಗಲೇ ಡಬ್ಬಿಂಗ್ ಹಕ್ಕು ಮಾರಾಟವಾಗಿರುವ ಸಿನಿಮಾ. 'ರಥಾವರ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಹಲವಾರು ವಿಚಾರಗಳಿಂದ ಸುದ್ದಿ ಆಗಿರುವ ತಾರಕಾಸುರ ಚಿತ್ರತಂಡದಿಂದ ಮತ್ತೊಂದು ವಿಚಾರ ಹೊರಬಿದ್ದಿದೆ.
ಸ್ಟಾರ್ ನಟರಿಗೆ ಲಿರಿಕ್ ಬರೆದು ಬಾಕ್ಸ್ ಆಫೀಸ್ ನಲ್ಲಿ ಆ ಹಾಡು ಹಿಟ್ ಆಗುವಂತೆ ಮಾಡಿರುವ ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಬಹದ್ದೂರ್ ಚೇತನ್ ತಾರಕಾಸುರ ಚಿತ್ರಕ್ಕೆ ಹಾಡನ್ನ ಬರೆದಿದ್ದಾರೆ. ವಿಶೇಷ ಅಂದರೆ ಇತ್ತೀಚಿಗಷ್ಟೇ 'ಕನಕ' ಸಿನಿಮಾದ "ಎಣ್ಣೆ ನಮ್ಸು ಊಟ ನಿಮ್ದು" ಹಾಡನ್ನ ಹಾಡಿ ಪ್ರೇಕ್ಷಕರ ಮನಸ್ಸು ಗೆದ್ದಿದ್ದ ಗಾಯಕ ನವೀನ್ ಸಜ್ಜು ಚೇತನ್ ಬರೆದ ಸಾಹಿತ್ಯಕ್ಕೆ ಧ್ವನಿ ಆಗಿದ್ದಾರೆ.
ಜರ್ಮನ್ ಯುವಕನ ಕನ್ನಡ ಪ್ರೇಮಕ್ಕೆ ತಲೆ ಬಾಗಿದ ಅಣ್ಣಾವ್ರ ಮಗ ಪುನೀತ್
ತಾರಕಾಸುರ ಸಿನಿಮಾ ಮೂಲ ವೈಭವ್ ಕನ್ನಡ ಸಿನಿಮಾರಂಗಕ್ಕೆ ನಾಯಕನಾಗಿ ಪರಿಚಯವಾಗುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ' ಕಾರ್ಯದರ್ಶಿ ನರಸಿಂಹಲು ಚಿತ್ರ ನಿರ್ಮಾಣ ಮಾಡುವುದರ ಜೊತೆಗೆ ತಮ್ಮ ಮಗನನ್ನ ಚಿತ್ರರಂಗಕ್ಕೆ ಹೀರೋ ಆಗಿ ಪರಿಚಯಿಸುತ್ತಿದ್ದಾರೆ.
ಚಂದನವನದ ಕೆಂಡಸಂಪಿಗೆ ಮಾನ್ವಿತಾ ಹರೀಶ್ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಧರ್ಮ ವಿಶ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದರು ಕುಮಾರ್ ಗೌಡ ಕ್ಯಾಮೆರಾ ವರ್ಕ್ ಸಿನಿಮಾಗಿದೆ. ಚಿತ್ರದಲ್ಲಿ ಖಳನಟನಾಗಿ ಡ್ಯಾನಿ ಸಫಾನಿ ಅಭಿನಯಿಸಿರುವುದು ಚಿತ್ರಕ್ಕೆ ಮತ್ತೊಂದು ವಿಶೇಷ.
ಸದ್ಯ ಚಿತ್ರೀಕರಣ ಮುಗಿಸಿರುವ ನಿರ್ದೇಶಕರು ಚುನಾವಣೆಯ ನಂತರ ಸಿನಿಮಾವನ್ನ ತೆರೆಗೆ ತರುವ ಆಲೋಚನೆಯಲ್ಲಿದ್ದಾರೆ. ಚಿತ್ರದ ಹಾಡುಗಳನ್ನ ಇನ್ನು ಕೆಲವೇ ದಿನಗಳಲ್ಲಿ ಪ್ರೇಕ್ಷಕರಿಗೆ ಕೇಳಿಸುವಂತಹ ಪ್ರಯತ್ನ ಮಾಡಲಿದೆ ಸಿನಿಮಾತಂಡ.
'ಟಗರು' ಗೆದ್ದ ಖುಷಿಯಲ್ಲಿ ಬಂತು 'ಬದುಕಿನ ಬಣ್ಣವೇ..' ಹಾಡು