Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೆಂಟಿಲೇಟರ್ ಸಿಗದೆ ಹಿರಿಯ ಗಾಯಕ ಜಿ.ಆನಂದ್ ನಿಧನ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ಗಾಯಕ ಜಿ. ಆನಂದ್ ಕೊರೊನಾಗೆ ಬಲಿಯಾಗಿದ್ದಾರೆ. ಇತ್ತೀಚಿಗೆ ಕೊರೊನಾಗೆ ಅನೇಕ ಸಿನಿಮಾಗಣ್ಯರು ಬಲಿಯಾಗಿದ್ದಾರೆ. ಇದೀಗ ದಕ್ಷಿಣದ ಚಿತ್ರರಂಗ ಮತ್ತೋರ್ವ ಪ್ರತಿಭಾವಂತ ಗಾಯಕನನ್ನು ಕಳೆದುಕೊಂಡಿದೆ.
ಕೊರೊನಾ ಸೋಂಕಿಗೆ ತುತ್ತಾಗಿದ್ದ 67 ವರ್ಷದ ತೆಲುಗಿನ ಖ್ಯಾತ ಗಾಯಕ ಆನಂದ್ ಅವರ ಆಕ್ಸಿಜನ್ ಪ್ರಮಾಣ 55ಕ್ಕೆ ಇಳಿಕೆಯಾಗಿತ್ತು. ಆಕ್ಸಿಜನ್ ಮತ್ತು ವೆಂಟಿಲೇಟರ್ ಗಾಗಿ ಅಂಗಲಾಚಿದರು ತಕ್ಷಣಕ್ಕೆ ಸಿಗದೆ ಕೊನೆಯುಸಿರೆಳೆದಿದ್ದಾರೆ. ಆಕ್ಸಿಜನ್ ಮತ್ತು ವೆಂಟಿಲೇಟರ್ ಗಾಗಿ ಅವರ ಸ್ನೇಹಿತರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿಕೊಂಡಿದ್ದರು. ವೆಂಟಿಲೇಟರ್ ಸಿಗುವಷ್ಟೊತ್ತಿಗೆ ಆನಂದ್ ಕೊನೆಯುಸಿರೆಳಿದ್ದಾರೆ.
ಕೋವಿಡ್: ನಟಿ ಅಭಿಲಾಷಾ ಪಾಟೀಲ್, ಶ್ರೀಪದ ನಿಧನ
ಆಂಧ್ರಪ್ರದೇಶದ ತಿರುಮಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಿನ್ನಲೆ ಗಾಯಕ ವೇಣು ವೆಂಟಿಲೇಟರ್ ಮತ್ತು ಆಕ್ಸಿಜನ್ ಗಾಗಿ ಆರ್ ಆರ್ ಆರ್ ಸಿನಿಮಾ ನಿರ್ಮಾಪಕರು ಮತ್ತು ಮೈತ್ರಿ ಮೂವಿಸ್ ಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದರು.
ಗಾಯಕ ಆನಂದ್ 1976ರಲ್ಲಿ ಅಮೆರಿಕ ಅಮ್ಮಾಯಿ ಸಿನಿಮಾ ಮೂಲಕ ವೃತ್ತಿ ಜೀವನ ಪ್ರಾರಂಭ ಮಾಡಿದ್ದರು. ಅನೇಕ ಗೀತೆಗಳಿಗೆ ಧ್ವನಿಯಾಗಿರುವ ಜಿ.ಆನಂದ್ ಇನ್ನು ನೆನಪು ಮಾತ್ರ. ಸ್ವರ ಮಾಧುರಿ ಎನ್ನುವ ಸಂಗೀತ ತಂಡವನ್ನು ಕಟ್ಟಿದ್ದರು. ಈ ತಂಡದ ಮೂಲಕ ಪ್ರಪಂಚದಾದ್ಯಂತ ಸಾಕಷ್ಟು ಲೈವ್ ಪ್ರದರ್ಶನಗಳನ್ನು ನಡೆಸಿಕೊಟ್ಟಿದ್ದಾರೆ.
ತೆಲುಗು ನಟ ಚಿರಂಜೀವಿ ಸಂತಾಪ ಸೂಚಿಸಿ, 'ಜಿ ಆನಂದ್ ಅವರ ನಿಧನದ ಸುದ್ದಿ ತಿಳಿದು ತೀವ್ರ ಆಘಾತಗೊಂಡಿದ್ದೇನೆ. ಅವರು ಹಾಡಿದ ಹಾಡಿಗೆ ನಾನು ಮೊದಲ ಬಾರಿಗೆ ತೆರೆಮೇಲೆ ನೃತ್ಯ ಮಾಡಿದ್ದೇನೆ. ಅದು ಅವರ ಜೊತೆಗಿನ ಉತ್ತಮ ಸಂಬಂಧವನ್ನು ಬೆಳೆಸಿತ್ತು. ಅವರ ನಿಧನ ತೀವ್ರ ದುಃಖದ ಸಂಗತಿಯಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.