Don't Miss!
- News SSLC Result 2024: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ಕೊಟ್ಟ ಭಟ್ಟರು
ಜುಲೈ 2 ರಂದು ನಟ ಗಣೇಶ್ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ನಿರ್ದೆಶಕ ಯೋಗರಾಜ್ ಭಟ್ಟರು ಗಣೇಶ್ಗೆ ಹಾಡೊಂದನ್ನು ಉಡುಗೊರೆಯಾಗಿ ನೀಡಲಿದ್ದಾರೆ!
ಗಣೇಶ್ ನಟಿಸಿ, ಯೋಗರಾಜ್ ಭಟ್ ನಿರ್ದೇಶಿಸಿರುವ 'ಗಾಳಿಪಟ 2' ಸಿನಿಮಾದ ಹೊಸ ಹಾಡೊಂದನ್ನು ಭಟ್ಟರು ಬಿಡುಗಡೆ ಮಾಡಿದ್ದು, ಅದೇ ಗಣೇಶ್ ಹುಟ್ಟುಹಬ್ಬಕ್ಕೆ ಭಟ್ಟರ ಕಡೆಯಿಂದ ಉಡುಗೊರೆಯಾಗಿದೆ.
ಇದೀಗ ಬಿಡುಗಡೆ ಆಗಿರುವ ಹಾಡನ್ನು ಜಯಂತ ಕಾಯ್ಕಿಣಿ ಬರೆದಿದ್ದು, "ನಾನಾಡದ ಮಾತೆಲ್ಲವ ಕದ್ದಾಲಿಸು" ಎಂಬ ಈ ಹಾಡನ್ನು ಸೋನು ನಿಗಮ್ ಸುಶ್ರಾವ್ಯವಾಗಿ ಹಾಡಿದ್ದಾರೆ. "ಗಾಳಿಪಟ" ಮೊದಲ ಭಾಗದ "ಮಿಂಚಾಗಿ ನೀನು ಬರಲು" ಹಾಡು ಕೂಡ ಜಯಂತ ಕಾಯ್ಕಿಣಿ, ಸೋನು ನಿಗಮ್, ಗಣೇಶ್ ಹಾಗೂ ಯೋಗರಾಜ್ ಭಟ್ ಅವರ ಕಾಂಬಿನೇಶನ್ ನಲ್ಲಿ ಬಂದು ಭರ್ಜರಿ ಯಶಸ್ಸು ಕಂಡಿತ್ತು. ಈಗ "ಗಾಳಿಪಟ 2" ಚಿತ್ರದ ಈ ಹಾಡು ಕೂಡ ಅದೇ ರೀತಿ ಯಶಸ್ಸು ಕಾಣಲಿದೆ ಎಂಬುದು ಚಿತ್ರತಂಡದ ನಿರೀಕ್ಷೆ.
''ನಮ್ಮ ಚಿತ್ರದ ನಾಯಕ ಗಣೇಶ್ ಅವರ ಹುಟ್ಟುಹಬ್ಬದ ಸಂದರ್ಭ. ಈ ಸುಂದರ ಕ್ಷಣಕ್ಕೆ ನಮ್ಮ ಹಾಡಿನ ಉಡುಗೊರೆ. ಜುಲೈ 2 ಗಣೇಶ್ ಹುಟ್ಟುಹಬ್ಬ. ಅಂದು ಅವರು ಊರಿನಲ್ಲಿರದ ಕಾರಣ ಈಗ ಮಾಧ್ಯಮ ಮಿತ್ರರ ಮುಂದೆ ಈ ಹಾಡು ಬಿಡುಗಡೆ ಮಾಡಿದ್ದೇವೆ. ಜುಲೈ 2 ರಂದು ಆನಂದ್ ಆಡಿಯೋ ಮೂಲಕ ಈ ಹಾಡು ಎಲ್ಲರಿಗೂ ತಲುಪಲಿದೆ ಎಂದು ನಿರ್ದೇಶಕ ಯೋಗರಾಜ್ ಭಟ್ ತಿಳಿಸಿದರು ಹಾಗೂ ಹಾಡಿನ ಪದಪದದ ಅರ್ಥ ವಿವರಿಸಿ, ಹಾಡು ಬರೆದಿರುವ ಜಯಂತ ಕಾಯ್ಕಿಣಿ ಕಾಯ್ಕಿಣಿ, ಹಾಡಿರುವ ಸೋನು ನಿಗಂ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಧನ್ಯವಾದ ಹೇಳಿದರು.
''ಮತ್ತೆ ಕೋವಿಡ್ ಹೆಚ್ಚುತ್ತಿರುವ ಕಾರಣ, ನಾನು ಈ ಬಾರಿ ನನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಿಲ್ಲ. ನಾನು ಅಂದು ಬೆಂಗಳೂರಿನಲ್ಲಿ ಇರುವುದಿಲ್ಲ. ಈ ಹಾಡನ್ನು ಕೇಳಿ ಮತ್ತೆ ಹದಿನೈದು ವರ್ಷಗಳ ಹಿಂದೆ ಹೋದೆ. ಅದೇ ಕಾಂಬಿನೇಷನ್ ನಲ್ಲಿ ಮತ್ತೆ ಇಂಪಾದ ಹಾಡು ಬಂದಿದೆ. ಅಷ್ಟೇ ಜನಪ್ರಿಯವಾಗಲಿದೆ ಎಂಬ ಭರವಸೆಯಿದೆ. ನನ್ನ ಹುಟ್ಟುಹಬ್ಬಕ್ಕೆ ಇದೊಂದು ವಿಶೇಷ ಉಡುಗೊರೆ. ನಿರ್ಮಾಪಕ ರಮೇಶ್ ರೆಡ್ಡಿ ಅವರು ಯಾವುದಕ್ಕೂ ಕೊರತೆ ಇಲ್ಲದೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಕುದುರೆಮುಖದಲ್ಲಿ ಸುಮಾರು 200 ಜನರ ತಂಡ ಇದ್ದೆವು. ಕಲಾ ನಿರ್ದೇಶಕ ಪಂಡಿತ್ ಅವರಂತೂ ಅದ್ಭುತ ಸೆಟ್ ಹಾಕಿದ್ದರು. ಯೋಗರಾಜ್ ಸರ್ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನೀರಿನಲ್ಲಿ ಐರನ್ ಬಾಕ್ಸ್ ಇಟ್ಟು ಹೊಗೆ ಬರೆಸಿದ್ದಾರೆ ಅವರು. ಇದರ ಬಗ್ಗೆ ಕೇಳಿದಾಗ ಹುಡುಗ ಹೀಟ್ ಆಗಿರುತ್ತಾನೆ. ಇದು ಅದರ ಸಂಕೇತವೆಂದರು. ಧನು ಮಾಸ್ಟರ್ ಸುಂದರವಾಗಿ ನೃತ್ಯ ಸಂಯೋಜನೆ ಮಾಡಿದ್ದಾರೆ'' ಎಂದರು ನಾಯಕ ಗಣೇಶ್.
ಹಾಡು ಚೆನ್ನಾಗಿದೆ. ಈ ಹಾಡಿಗೆ ಬಳಿಸಿದ ವಸ್ತುಗಳನ್ನು ನೆನಪಿಗಾಗಿ ನಮ್ಮ ಮನೆಯ ಬಳಿ ತರಿಸಿಟ್ಟುಕೊಂಡಿದ್ದೀನಿ. ಈ ಹಾಡನ್ನು ನನ್ನ ಮಗಳು ದಿನ ಕೇಳುತ್ತಿರುತ್ತಾಳೆ. ಬಿಡುಗಡೆ ಮುಂಚೆಯೇ ಈ ಹಾಡು ಗೆದ್ದಿದೆ ಎನ್ನಬಹುದು. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.
ಸುಂದರವಾದ ಹಾಡು. ಅಷ್ಟೇ ಸುಂದರವಾದ ಸ್ಥಳ. ಅದ್ಭುತವಾದ ಸೆಟ್ ನಲ್ಲಿ ಐದು ದಿನಗಳ ಕಾಲ ಈ ಹಾಡಿನ ಚಿತ್ರೀಕರಣ ನಡೆದಿದೆ. ಗಣೇಶ್ ಅವರನ್ನು ಕ್ಲೋಸಪ್ ನಲ್ಲಿ ತೋರಿಸಿದ್ದೇವೆ. ತುಂಬಾ ಮುದ್ದಾಗಿ ಕಾಣುತ್ತಾರೆ ಎನ್ನುತ್ತಾರೆ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ.
'ಗಾಳಿಪಟ 2' ಸಿನಿಮಾದಲ್ಲಿ ಗಣೇಶ್ ಜೊತೆಗೆ ದಿಗಂತ್ ಹಾಗೂ 'ಲೂಸಿಯಾ' ಪವನ್ ಕುಮಾರ್ ಸಹ ನಟಿಸಿದ್ದಾರೆ. ಸಿನಿಮಾದಲ್ಲಿ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ, ನಿಶ್ವಿಕಾ ನಾಯ್ಡು ಮತ್ತು ಅನಂತ್ ನಾಗ್ ಸಹ ಸಿನಿಮಾದಲ್ಲಿದ್ದಾರೆ.