Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುಕಟ್ಟೆಗೆ 'ಶ್ರಾವಣಿ ಸುಬ್ರಮಣ್ಯ' ಧ್ವನಿಸುರುಳಿ
ಕನ್ನಡದ ಮತ್ತೊಂದು ಬಹು ನಿರೀಕ್ಷಿತ ಚಿತ್ರ 'ಶ್ರಾವಣಿ ಸುಬ್ರಮಣ್ಯ'. ಕಳೆದ ಶನಿವಾರ (ಡಿ.7) ಬೆಂಗಳೂರಿನ ಬಸವನಗುಡಿಯಲ್ಲಿ ಸಹಸ್ರಾರು ನೋಡುಗರ ಮುಂದೆ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಧ್ವನಿ ಸುರುಳಿಯನ್ನು ಬಿಡುಗಡೆಗೊಳಿಸಿತು.
ಆರು ವರ್ಷಗಳ ಬಳಿಕ 'ಚೆಲುವಿನ ಚಿತ್ತಾರ' ಖ್ಯಾತಿಯ ಜೋಡಿ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಅಮೂಲ್ಯ ನಟಿಸಿರುವ 'ಶ್ರಾವಣಿ ಸುಬ್ರಮಣ್ಯ' ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಂಭ್ರಮಕ್ಕೆ ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರು ಆಗಮಿಸಿದರು. ಅಂದಿನ ಸಮಾರಂಭದ ಮುಖ್ಯ ವಿಚಾರ ಅಂದರೆ ಕನ್ನಡದ ಜನಪ್ರಿಯ ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಅವರ ಮ್ಯೂಜಿಕಲ್ ನೈಟ್.
ನಾಯಕಿ ಪರುಲ್ ಯಾದವ್ ಅವರಿಂದ ನೃತ್ಯ, ಸಂದೀಪ್, ನೇಹಾ ಪಾಟಿಲ್, ಹಾರ್ದಿಕಾ ಶೆಟ್ಟಿ ಅವರ ನೃತ್ಯ, ಕನ್ನಡದ ಹಳೆಯ ಹಾಡುಗಳ ಕಾರ್ಯಕ್ರಮ ನೇಹಾ ಸಕ್ಸೇನಾ ಅವರ ಫ್ಯಾಷನ್ ಶೋ, ಕೃಷ್ಣೇಗೌಡರ ಹಾಸ್ಯದ ರಸದೌತಣ ಹಾಗೂ ಇನ್ನಿತರ ಮನರಂಜನೆ ಕಾರ್ಯಕ್ರಮಗಳು ಸಭಿಕರನ್ನು ರಂಜಿಸಿದವು. "Mad for each other" ಎಂಬುದು ಚಿತ್ರದ ಅಡಿಬರಹ.
ತಾರಾ, ಗಿರಿಜಾ ಲೋಕೇಶ್, ನೀನಾಸಂ ಅಶ್ವಥ್, ಶಿಲ್ಪಾ ಗಣೇಶ್, ಜೀ ಕನ್ನಡದ ಗೌತಮ್ ಮಚ್ಚಯ್ಯ, ಪರ್ತಕರ್ತ ರವಿ ಹೆಗ್ಡೆ, ನಿರ್ದೇಶಕರುಗಳಾದ ನಾಗತಿಹಳ್ಳಿ ಚಂದ್ರಶೇಖರ್, ಎ ಪಿ ಅರ್ಜುನ್, ಪವನ್ ಒಡೆಯರ್ ಹಾಗೂ ಇನ್ನಿತರರು ಸಮಾರಂಭದಲ್ಲಿ ಉಪಸ್ಥಿತರಾಗಿ ಶ್ರಾವಣಿ ಸುಬ್ರಹ್ಮಣ್ಯ ಚಿತ್ರಕ್ಕೆ ಶುಭ ಕೋರಿದರು. (ಒನ್ಇಂಡಿಯಾ ಕನ್ನಡ)