ಸುಂದರ ಸಾಹಿತ್ಯಕ್ಕೆ ಸೊಗಸಾದ ಸಂಗೀತ ಸೇರಿ ಮುದ್ದಾಗಿದೆ ಮೇಘನಾ ಹಾಡು
'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾ ದಿನೇ ದಿನೇ ಜನರಿಗೆ ಹತ್ತಿರ ಆಗುತ್ತಿದೆ. ಅದು ಸಿನಿಮಾದ ಹಾಡುಗಳ ಮೂಲಕ. ಈಗ ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ.
''ಯಾವುದಿ ದಾರಿ? ಯಾವುದಿ ತಿರುವು?..'' ಹಾಡು ಇದೀಗ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಚಿತ್ರದ ನಿರ್ದೇಶಕರಾದ ಕಾಂತ ಕನ್ನಲಿ ಅವರೇ ಈ ಹಾಡನ್ನು ಬರೆದಿದ್ದಾರೆ. ವಿ.ಶ್ರೀಧರ್ ಸಂಭ್ರಮ್ ಸಂಗೀತ ಹಾಡಿನಲ್ಲಿದೆ. ಒಮ್ಮೆ ಕೇಳಿದರೆ ಮತ್ತೆ ಮತ್ತೆ ಹೇಳುವ ಹಾಗೆ ಮೋಡಿ ಹಾಡಿನಲ್ಲಿ ತುಂಬಿದೆ.

ಅಂದಹಾಗೆ, ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ಹಾಡುವ ಮೂಲಕ ತಮಿಳು ನಟ ಸಿಂಬು ಮೊದಲ ಬಾರಿಗೆ ಕನ್ನಡಕ್ಕೆ ಕಾಲಿಟ್ಟಿದ್ದಾರೆ.
ಚಿತ್ರದ ಉಳಿದ ಹಾಡಿಗಳನ್ನು ಜಯಂತ್ ಕಾಯ್ಕಿಣಿ ಹಾಗೂ ವಿ.ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ. ಮೇಘನಾ ಜೊತೆಗೆ ತಿಲಕ್ ಸಿನಿಮಾದಲ್ಲಿ ನಟಿಸಿದ್ದಾರೆ.


Click it and Unblock the Notifications











