Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜೀವ್ನಾನೇ ನಾಟ್ಕ ಸಾಮಿ' ಹಾಡು ಬಿಡುಗಡೆ ಮಾಡಿದ ವಿಜಯ್ ರಾಘವೇಂದ್ರ
'ಜೀವ್ನಾನೇ ನಾಟ್ಕ ಸಾಮಿ' ಸಿನಿಮಾದ ಎರಡನೇ ಹಾಡನ್ನು 'ಚಿನ್ನಾರಿ ಮುತ್ತ' ವಿಜಯ್ ರಾಘವೇಂದ್ರ ಬಿಡುಗಡೆ ಮಾಡಿದ್ದು, ಅಕ್ಟೋಬರ್ 30 ರಂದು ಆನಂದ್ ಆಡಿಯೋ ಯ್ಯೂಟ್ಯೂಬ್ ಚಾನಲ್ನಲ್ಲಿ ಲಭ್ಯವಾಗಲಿದೆ.
''ಕದ್ದು ಮುಚ್ಚಿ ನೋಡಬೇಡ..... ಕನಸೇ ನನ್ನ ಕಾಡಬೇಡ.....'' ಎನ್ನುವ ಈ ಮಾಧುರ್ಯ ಭರಿತ ಹಾಡಿಗೆ ಅತೀಶಯ ಜೈನ್ ರಾಗಸಂಯೋಜನೆ ಮಾಡಿದ್ದು ಶ್ರೀ ಹರ್ಷ ಹಾಡಿದ್ದಾರೆ. ನಿರ್ದೇಶಕ ರಾಜು ಭಂಡಾರಿ ರಾಜಾವರ್ತ ಅವರೇ ಸಾಹಿತ್ಯ ರಚಿಸಿದ್ದಾರೆ.
ಐಟಿ ಕ್ಷೇತ್ರಕ್ಕೆ ಗುಡ್ ಬೈ ಹೇಳಿ ಬಣ್ಣದಲೋಕದಲ್ಲಿ ಮಿಂಚುತ್ತಿರುವ ವಿನಯ್ ಕಶ್ಯಪ್
ಇದಕ್ಕೂ ಮುಂಚೆ 'ಜೀವ್ನಾನೇ ನಾಟ್ಕ ಸಾಮಿ' ಚಿತ್ರದ ಮೊದಲ ಹಾಡನ್ನು ಡಾಲಿ ಖ್ಯಾತಿಯ ಧನಂಜಯ್ ರಿಲೀಸ್ ಮಾಡಿದ್ದರು. ಮೂರು ದಿನದ ಮಾರ್ಕೆಟ್....ಎಂಬ ಹಾಡನ್ನು ನವೀನ್ ಸಜ್ಜು ಹಾಡಿದ್ದರು.
ನಟ ಕಿರಣ್ ರಾಜ್ ಮತ್ತು ಶ್ರೀಹರ್ಷ (ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿ) ಪವಿತ್ರ ಕೋಟ್ಯಾನ್ ಮತ್ತು ಅನಿಕ ರಮ್ಯ ಸೇರಿದಂತೆ ಹಲವರು ಪ್ರಮುಖ ತಾರಾಗಣದಲ್ಲಿ ಕಾಣಿಸಿಕೊಂಡಿದ್ದು, ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜಾವರ್ತ ನಿರ್ದೇಶಿಸಿದ್ದಾರೆ. ಉಮೇಶ್ ಆರ್ಬಿ ಅವರ ಸಂಕಲನ ಒಳಗೊಂಡಿದೆ.
ಯಥಾ ದೃಷ್ಟಿ ತಥಾ ಸೃಷ್ಟಿ ಎಂಬ ಭಗವದ್ಗೀತೆಯ ಸೂಕ್ತಿಯ ಹಿನ್ನೆಲೆಯಲ್ಲಿ ಮೂಡಿಬಂದ ಚಿತ್ರದ ಕಥಾವಸ್ತುವು ಮನರಂಜನೆಯ ಜೊತೆಗೆ ಸಾಮಾಜಿಕ ಕಳಕಳಿ ಸಂದೇಶದಿಂದ ಕೂಡಿದೆ. ಆರ್ಯ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ, ಶ್ರೀಮತಿ ಲಲಿತಾ ರಾಜಶೇಖರ್ ಶಿರಹಟ್ಟಿ ನಿರ್ಮಿಸಿದ್ದು ಬಿಡುಗಡೆಗೆ ಸಿದ್ದವಾಗಿದೆ.