Don't Miss!
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಫಿತೋಟ'ದಿಂದ ಬಂತು ಹೊಸ ಹಾಡು ನೋಡು ಗುರು....
ಟಿ.ಎನ್ ಸೀತಾರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ಕಾಫಿತೋಟ' ಹಂತ ಹಂತವಾಗಿ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಪೋಸ್ಟರ್ ಮತ್ತು ಹಾಡುಗಳ ಮೂಲಕ ಮೋಡಿ ಮಾಡುತ್ತಿದೆ.
'ಕಾಫಿತೋಟ' ಚಿತ್ರದಲ್ಲಿ ಎರಡು ಹಾಡುಗಳಿವೆ. ಒಂದು ಹಾಡಿಗೆ ಅನೂಪ್ ಸೀಳಿನ್ ಹಾಗೂ ಮತ್ತೊಂದು ಹಾಡಿಗೆ ಮಿದುನ್ ಮುಕುಂದನ್ ಸಂಗೀತ ಸಂಯೋಜಿಸಿದ್ದಾರೆ. ಈಗ ಅನೂಪ್ ಸೀಳಿನ್ ಸಂಗೀತ ನಿರ್ದೇಶನದ 'ಹಾಡಾಡ್ಕೊಂಡಿರು ಓಡಾಡ್ಕೊಂಡಿರು...' ಹಾಡಿನ ವಿಡಿಯೋ ವರ್ಷನ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಒಳ್ಳೆ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.
ಈ ಹಾಡಿಗೆ ಪತ್ರಕರ್ತ ಜೋಗಿ ಅವರು ಸಾಹಿತ್ಯ ಬರೆದಿದ್ದು, ಅನೂಪ್ ಸೀಳಿನ್, ರಾಜ್ ಗುರು ಹೊಸಕೋಟೆ, ಅನನ್ಯ ಭಗತ್ ಧ್ವನಿಯಾಗಿದ್ದಾರೆ. ಹಾಗೆ, ಕಾಫಿತೋಟದ ಇನ್ನೊಂದು ಹಾಡಿಗೆ ಮಿದುನ್ ಮುಕುಂದನ್ ಸಂಗೀತ ಸಂಯೋಜಿಸಿದ್ದು, 'ಇಂದು ನಿನ್ನ ಎದುರಲಿ ಮಾತೇ ಬೇಡ ಅನಿಸಿದೆ' ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.
ಟಿ.ಎನ್.ಎಸ್ 'ಕಾಫಿ ತೋಟ'ದಲ್ಲಿ ಪವರ್ ಸ್ಟಾರ್ ಹಾಡು-ಹರಟೆ
ಅಂದ್ಹಾಗೆ, ಟಿ.ಎನ್.ಸೀತಾರಾಮ್ ಅವರು 'ಮೀರಾ ಮಾಧವ ರಾಘವ' ಚಿತ್ರದ ನಂತರ 'ಕಾಫಿತೋಟ'ಕ್ಕೆ ಆಕ್ಷನ್ ಕಟ್ ಹೇಳಿದ್ದು, 'ಮನ್ವಂತರ ಚಿತ್ರ' ಸಂಸ್ಥೆ ನಿರ್ಮಾಣ ಮಾಡಿದೆ. ರಘು ಮುಖರ್ಜಿ, ರಾಧಿಕಾ ಚೇತನ್, ಸಂಯುಕ್ತ ಹೊರನಾಡು, ಅಪೇಕ್ಷ ಪುರೋಹಿತ್, ಅಚ್ಯುತ್ ಕುಮಾರ್, ರಾಹುಲ್ ಮಾಧವ ಸೇರಿದಂತೆ ಇನ್ನು ಹಲವು ಕಲಾವಿದರು ಅಭಿನಯಿಸಿದ್ದಾರೆ.
'ಕಾಫಿತೋಟ'ದ 'ಹಾಡಾಡ್ಕೊಂಡಿರು ಓಡಾಡ್ಕೊಂಡಿರು...' ಹಾಡು ಮುಂದಿದೆ ನೋಡಿ ಎಂಜಾಯ್ ಮಾಡಿ