Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನಸ್ಸನ್ನ ತಲ್ಲಣಗೊಳಿಸುತ್ತಿದೆ 'ಮುಗುಳುನಗೆ'ಯ 'ರೂಪಸಿ' ಹಾಡು
ಜುಲೈ 12, ಸಂಜೆ 5 ಗಂಟೆ ಯಾವಾಗ ಆಗುತ್ತೋ ಅಂತ ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳು ಕಾಯುತ್ತಿದ್ದರು. ಯಾಕಂದ್ರೆ, 'ಮುಗುಳುನಗೆ' ಚಿತ್ರದ ಎರಡನೇ ಹಾಡು ಬಿಡುಗಡೆಯಾಗುತ್ತೆ ಎಂದು ಚಿತ್ರತಂಡ ಹೇಳಿತ್ತು. ಹೇಳಿದಂತೆ ಹಾಡು ಕೂಡ ಬಿಡುಗಡೆಯಾಗಿದ್ದು, ಮತ್ತೊಂದು 'ಮುಂಗಾರು ಮಳೆ' ನೆನಪಿಸುತ್ತಿದೆ.
ಹೌದು, 'ಮುಂಗಾರು ಮಳೆ' ಚಿತ್ರದಲ್ಲಿ ''ಅನಿಸುತಿದೆ ಯಾಕೋ ಇಂದು........'' ಎನ್ನುವ ಸಾಲುಗಳನ್ನ ಗೀಚಿ ಸಂಗೀತ ಪ್ರೇಮಿಗಳ ಮನಸ್ಸು ತಲ್ಲಣಗೊಳಿಸಿದ್ದ ಜಯಂತ್ ಕಾಯ್ಕಿಣಿ ಅಂತಹದ್ದೇ ಮಧುರವಾದ ಗೀತೆಯನ್ನ ನೀಡಿದ್ದಾರೆ.
ಮತ್ತೆ ಜೋಗದ ಗುಂಡಿ ಬಳಿ ಗಣೇಶ್ - ಭಟ್ಟರ ಸಂಚಾರ
''ರೂಪಸಿ ಸುಮ್ಮನೆ ಹೇಗಿರಲಿ, ನೀನ್ನನೇ ನೋಡುತ ಕೂತು......ಕೋಪಿಸಿಕೊಳ್ಳದೇ ಜ್ಞಾಪಿಸಿ ನೀ, ಮರೆತರೆ ಮುಂದಿನ ಮಾತು......'' ಎಂದು ಶುರುವಾಗುವ ಸಾಲುಗಳು ಒಮ್ಮೆ ಕೇಳಿದರು ಸಾಕು ಇಷ್ಟವಾಗಿಬಿಡುತ್ತೆ.
'ಮುಗುಳು ನಗು'ತ್ತಲೇ ವೇದಾಂತ ಹೇಳಿದ ಭಟ್ಟರ ಈ ಹಾಡು ಕೇಳಿ...
ಗಾಯಕ ಸೋನು ನಿಗಮ್ ಧ್ವನಿಯಲ್ಲಿ ಈ ಹಾಡು ಮೂಡಿ ಬಂದಿದ್ದು, 'ರೂಪಸಿ' ಹಾಡಿನ ಇಂಪು ಮತ್ತಷ್ಟು ಹೆಚ್ಚಾಗಿದೆ ಎನ್ನಬಹುದು. ಅಂದ್ಹಾಗೆ, 'ಮುಗುಳುನಗೆ' ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಇನ್ನುಳಿದಂತೆ ಯೋಗರಾಜ್ ಭಟ್ ನಿರ್ದೇಶನವಿದ್ದು, ಸೈಯಾದ್ ಸಲಾಂ ನಿರ್ಮಾಣ ಮಾಡಿದ್ದಾರೆ. ಗಣೇಶ್ ಜೋಡಿಯಾಗಿ ಚಿತ್ರದಲ್ಲಿ ಒಟ್ಟು ನಾಲ್ಕು ನಾಯಕಿಯರಿದ್ದು, 'ಸಿದ್ಧಾರ್ಥ್' ಖ್ಯಾತಿಯ ಅಪೂರ್ವ ಆರೋರ, ಆಶಿಕಾ, ನಿಖಿತಾ ನಾರಾಯಣ್ ಮತ್ತು ವಿಶೇಷ ಪಾತ್ರದಲ್ಲಿ ನಟಿ ಅಮೂಲ್ಯ ಕಾಣಿಸಿಕೊಂಡಿದ್ದಾರೆ.