Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನಸ್ಸನ್ನ ತಲ್ಲಣಗೊಳಿಸುತ್ತಿದೆ 'ಮುಗುಳುನಗೆ'ಯ 'ರೂಪಸಿ' ಹಾಡು
ಜುಲೈ 12, ಸಂಜೆ 5 ಗಂಟೆ ಯಾವಾಗ ಆಗುತ್ತೋ ಅಂತ ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳು ಕಾಯುತ್ತಿದ್ದರು. ಯಾಕಂದ್ರೆ, 'ಮುಗುಳುನಗೆ' ಚಿತ್ರದ ಎರಡನೇ ಹಾಡು ಬಿಡುಗಡೆಯಾಗುತ್ತೆ ಎಂದು ಚಿತ್ರತಂಡ ಹೇಳಿತ್ತು. ಹೇಳಿದಂತೆ ಹಾಡು ಕೂಡ ಬಿಡುಗಡೆಯಾಗಿದ್ದು, ಮತ್ತೊಂದು 'ಮುಂಗಾರು ಮಳೆ' ನೆನಪಿಸುತ್ತಿದೆ.
ಹೌದು, 'ಮುಂಗಾರು ಮಳೆ' ಚಿತ್ರದಲ್ಲಿ ''ಅನಿಸುತಿದೆ ಯಾಕೋ ಇಂದು........'' ಎನ್ನುವ ಸಾಲುಗಳನ್ನ ಗೀಚಿ ಸಂಗೀತ ಪ್ರೇಮಿಗಳ ಮನಸ್ಸು ತಲ್ಲಣಗೊಳಿಸಿದ್ದ ಜಯಂತ್ ಕಾಯ್ಕಿಣಿ ಅಂತಹದ್ದೇ ಮಧುರವಾದ ಗೀತೆಯನ್ನ ನೀಡಿದ್ದಾರೆ.
ಮತ್ತೆ ಜೋಗದ ಗುಂಡಿ ಬಳಿ ಗಣೇಶ್ - ಭಟ್ಟರ ಸಂಚಾರ
''ರೂಪಸಿ ಸುಮ್ಮನೆ ಹೇಗಿರಲಿ, ನೀನ್ನನೇ ನೋಡುತ ಕೂತು......ಕೋಪಿಸಿಕೊಳ್ಳದೇ ಜ್ಞಾಪಿಸಿ ನೀ, ಮರೆತರೆ ಮುಂದಿನ ಮಾತು......'' ಎಂದು ಶುರುವಾಗುವ ಸಾಲುಗಳು ಒಮ್ಮೆ ಕೇಳಿದರು ಸಾಕು ಇಷ್ಟವಾಗಿಬಿಡುತ್ತೆ.
'ಮುಗುಳು ನಗು'ತ್ತಲೇ ವೇದಾಂತ ಹೇಳಿದ ಭಟ್ಟರ ಈ ಹಾಡು ಕೇಳಿ...
ಗಾಯಕ ಸೋನು ನಿಗಮ್ ಧ್ವನಿಯಲ್ಲಿ ಈ ಹಾಡು ಮೂಡಿ ಬಂದಿದ್ದು, 'ರೂಪಸಿ' ಹಾಡಿನ ಇಂಪು ಮತ್ತಷ್ಟು ಹೆಚ್ಚಾಗಿದೆ ಎನ್ನಬಹುದು. ಅಂದ್ಹಾಗೆ, 'ಮುಗುಳುನಗೆ' ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಇನ್ನುಳಿದಂತೆ ಯೋಗರಾಜ್ ಭಟ್ ನಿರ್ದೇಶನವಿದ್ದು, ಸೈಯಾದ್ ಸಲಾಂ ನಿರ್ಮಾಣ ಮಾಡಿದ್ದಾರೆ. ಗಣೇಶ್ ಜೋಡಿಯಾಗಿ ಚಿತ್ರದಲ್ಲಿ ಒಟ್ಟು ನಾಲ್ಕು ನಾಯಕಿಯರಿದ್ದು, 'ಸಿದ್ಧಾರ್ಥ್' ಖ್ಯಾತಿಯ ಅಪೂರ್ವ ಆರೋರ, ಆಶಿಕಾ, ನಿಖಿತಾ ನಾರಾಯಣ್ ಮತ್ತು ವಿಶೇಷ ಪಾತ್ರದಲ್ಲಿ ನಟಿ ಅಮೂಲ್ಯ ಕಾಣಿಸಿಕೊಂಡಿದ್ದಾರೆ.