Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಶಿವಯೋಗಿ ಪುಟ್ಟಯ್ಯಜ್ಜ' ಧ್ವನಿ ಸುರುಳಿ ಬಿಡುಗಡೆ
ಗದುಗಿನ ವೀರೇಶ್ವರ ಪುಣ್ಯಾಶ್ರಮ, ಗಾನಕೋಗಿಲೆ ಶ್ರೀ.ಪುಟ್ಟರಾಜ ಗವಾಯಿಗಳು ಬೆಳೆಸಿದ ಈ ವಿದ್ಯಾ ಸಂಸ್ಥೆಯಲ್ಲಿ ಸಾವಿರಾರು ಮಕ್ಕಳು ವಿದ್ಯೆ ಕಲಿಯುತ್ತಿದ್ದಾರೆ. ಕೇವಲ 5 ತಿಂಗಳ ಮಗುವಿದ್ದಾಗಲೇ ತನ್ನ ಕಣ್ಣುಗಳನ್ನು ಕಳೆದುಕೊಂಡು ಅಂಧರಾಗಿದ್ದ ಪುಟ್ಟಯ್ಯಜ್ಜರ ಈ ಸಂಸ್ಥೆಯಲ್ಲಿ ಕಲಿತ ನೂರಾರು ಪ್ರತಿಭೆಗಳು ದೇಶದುದ್ದಗಲಕ್ಕೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅಂಥ ಮಹಾಪುರುಷರ ಜೀವನಕಥೆ ಈಗ ಬೆಳ್ಳಿ ತೆರೆಯ ಮೇಲೆ ಮೂಡಿಬರುತ್ತಿರುವುದು ಎಲ್ಲಿರಿಗೂ ಗೊತ್ತಿರುವ ವಿಷಯ. ಹಿರಿಯ ನಟ ಉದಯ್ಕುಮಾರ್ ಅವರ ಮೊಮ್ಮಗಳಾದ ಹಂಸ ವಿಜೇತ ನಿರ್ದೇಶನದಲ್ಲಿ ತಯಾರಾಗಿರುವ 'ಶಿವಯೋಗಿ ಪುಟ್ಟಯ್ಯಜ್ಜ' ಹೆಸರಿನ ಈ ಚಿತ್ರದಲ್ಲಿ ನಟ ವಿಜಯರಾಘವೇಂದ್ರ ಪುಟ್ಟರಾಜರಾಗಿ ಅಭಿನಯಿಸಿದ್ದಾರೆ. ದಶಕಗಳ ಹಿಂದೆ ತೆರೆಕಂಡ ಪಂಚಾಕ್ಷರಿ ಗವಾಯಿಗಳು ಚಿತ್ರದಲ್ಲಿಯೂ ಅಭಿನಯಿಸಿದ್ದರು. ['ಶಿವಯೋಗಿ ಪುಟ್ಟಯ್ಯಜ್ಜ'ನಾಗಿ ವಿಜಯರಾಘವೇಂದ್ರ]
2014 ಅವರ ಜನ್ಮ ಶತಮಾನೋತ್ಸವ ವರ್ಷ ಇದರ ಸವಿನೆನಪಿಗಾಗಿ ಗವಾಯಿಗಳ ಸಾಧನೆ, ಸೇವೆ ಹಾಗೂ ಜೀವನ ಚರಿತ್ರೆಯನ್ನು ಬೆಳ್ಳಿತೆರೆಯ ಮೇಲೆ ತರಬೇಕೆಂಬ ಉದ್ದೇಶದಿಂದ ನಿರ್ಮಾಪಕರಾದ ಶ್ಯಾಮ್ ಮುಕುಂದ ನವಲೆ ಈ ಚಿತ್ರದ ನಿರ್ಮಾಪಕರು. [ಗದಗದಲ್ಲಿ ಪುಟ್ಟರಾಜರ ಶತಮಾನೋತ್ಸವ ಸಮಾರಂಭ]
ಗಾನಯೋಗಿ ಪಂಚಾಕ್ಷರ ಗವಾಯಿಗಳ ಪರಮ ಶಿಷ್ಯರಾದ ಪುಟ್ಟಯ್ಯಜ್ಜರು ಉತ್ತಮ ಕವಿ ಹಾಗೂ ಹಾಡುಗಾರರಾಗಿದ್ದರಲ್ಲದೆ ಸಾರಂಗಿ, ಹಾರ್ಮೋನಿಯಂ, ಪಿಟೀಲು ಹಾಗೂ ತಬಲಾದಲ್ಲಿ ಪರಿಣತಿ ಹೊಂದಿದ್ದಾರೆ. ಮೇ ಅಂತ್ಯದಲ್ಲಿ ಅಥವಾ ಜೂನ್ ಮೊದಲವಾರ ಈ ಚಿತ್ರ ಬಿಡುಗಡೆಯಾಗಲಿದೆ.
ಉಮೇಶ ಪುರಾಣಿಕ್ ಕಥೆ - ಚಿತ್ರಕಥೆ ಬರೆದಿದ್ದು ಸತೀಶ್ಚಂದ್ರ ಛಾಯಾಗ್ರಹಣ ಮಾಡಿದ್ದಾರೆ. ವಿಜಯ ರಾಘವೇಂದ್ರ, ಶ್ರುತಿ, ಅಭಿಜಿತ್, ಶಶಿಕುಮಾರ್, ಭವ್ಯಶ್ರೀ ರೈ, ಅನುಪ್ರಭಾಕರ್, ಉಮೇಶ್ ನವಲೆ, ನಿರ್ದೇಶಕ ಶಂಕರಲಿಂಗ ಸುಗ್ನಳ್ಳಿ ಅಭಿನಯಿಸಿದ್ದಾರೆ. (ಒನ್ಇಂಡಿಯಾ ಕನ್ನಡ)