Don't Miss!
- News ದೇಶದ ಪ್ರಮುಖ 4 ಶಕ್ತಿಗಳ ಪರವಾಗಿ ಬಿಜೆಪಿ- ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Sports KKR vs RR IPL 2024: ಟೇಬಲ್ ಟಾಪರ್ ಸ್ಥಾನಕ್ಕಾಗಿ ಹಣಾಹಣಿ; ಟಾಸ್ ವರದಿ, ಆಡುವ 11ರ ಬಳಗ
- Lifestyle ಸೌದಿಯಲ್ಲಿ ಮಳೆ, ಪ್ರವಾಹ...ಮರುಭೂಮಿ ಮರೆಯಾಗಿ ನಳನಳಿಸುವ ಹಸಿರು...! ಇದು ಹೇಗೆ ಸಾಧ್ಯ ಗೊತ್ತಾ?
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಡೆಯಾಜ್ಞೆ ತೆರವಾದರೂ ಒಟಿಟಿಯಲ್ಲಿ ಪ್ರಸಾರವಾಗಲ್ಲ 'ವರಾಹ ರೂಪಂ' ಹಾಡು!
'ಕಾಂತಾರ' ಸಿನಿಮಾದ 'ವರಾಹ ರೂಪಂ' ಹಾಡು ಬಳಸದಂತೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳದ ಕೋಳಿಕ್ಕೊಡ್ ಜಿಲ್ಲಾ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶ ನೀಡಿದೆ.
ಕೋಳಿಕ್ಕೊಡ್ ನ್ಯಾಯಾಲಯವು 'ಕಾಂತಾರ' ಸಿನಿಮಾದ ನಿರ್ಮಾಪಕರ ಪರವಾಗಿ ಆದೇಶ ನೀಡಿದ್ದರೂ ಸಹ 'ವರಾಹ ರೂಪಂ' ಹಾಡನ್ನು ಈ ಹಿಂದಿನ ಮಾದರಿಯಲ್ಲಿ ಬಳಸಲಾಗುತ್ತಿಲ್ಲ.
'ವರಾಹ ರೂಪಂ' ಹಾಡು ನಮ್ಮ ನವರಸಂ ಆಲ್ಬಂನ ಹಾಡಿನ ನಕಲು, ಹಾಗಾಗಿ ಆ ಹಾಡು ಬಳಸದಂತೆ ತಡೆಯಾಜ್ಞೆ ನೀಡಬೇಕೆಂದು ಥೈಕ್ಕುಡಂ ಬ್ರಿಡ್ಜ್ ಸಂಗೀತ ತಂಡವು ಕೋಳಿಕ್ಕೊಡ್ ನ್ಯಾಯಾಲಯದ ಮೊರೆ ಹೋಗಿತ್ತು. ಅಂತೆಯೇ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಲಾಗಿತ್ತು. ಹಾಗಾಗಿ ಒಟಿಟಿಯಲ್ಲಿ ಬಿಡುಗಡೆ ಆದ 'ಕಾಂತಾರ' ಸಿನಿಮಾದಲ್ಲಿ ಬೇರೆ ಸಂಗೀತ ಬಳಸಲಾಗಿತ್ತು.
ಈಗ ಆದೇಶ 'ಕಾಂತಾರ' ಚಿತ್ರತಂಡದ ಪರವಾಗಿದೆಯಾದರೂ ಹಳೆಯ ಮಾದರಿಯಲ್ಲಿ ಹಾಡನ್ನು ಬಳಸುತ್ತಿಲ್ಲ. ಕಾರಣ ಇದೇ ಹಾಡಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣ ಬಾಕಿ ಇದ್ದು ಅದು ಇತ್ಯರ್ಥವಾದ ಬಳಿಕವಷ್ಟೆ ಹಾಡನ್ನು ಬಳಸಲು ಚಿತ್ರತಂಡ ಯೋಜಿಸಿದೆ.
ಕೋಳಿಕ್ಕೊಡ್ ಜಿಲ್ಲಾ ನ್ಯಾಯಾಲಯದಲ್ಲಿ ಥೈಕ್ಕುಡಂ ಬ್ರಿಡ್ಜ್ ಸಂಗೀತ ತಂಡ ದಾವೆ ಹೂಡಿದ್ದರೆ, 'ನವರಸಂ' ಹಾಡಿನ ಹಕ್ಕು ಹೊಂದಿರುವ ಮಾತೃಭೂಮಿ ಪ್ರಿಂಟಿಂಗ್ ಆಂಡ್ ಪಬ್ಲಿಕೇಶನ್ಸ್ ಸಂಸ್ಥೆ ಕೇರಳದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯವು 'ವರಾಹ ರೂಪಂ' ಹಾಡನ್ನು ಬಳಸದಂತೆ ಆದೇಶ ನೀಡಿತ್ತು. ಅಲ್ಲಿ ತಡೆಯಾಜ್ಞೆ ತೆರವು ಆದೆಶ ಹೊರಬಿದ್ದಿಲ್ಲವಾದ್ದರಿಂದ ಈಗಲೇ ಹಳೆಯ ಮಾದರಿಯಲ್ಲಿ 'ವರಾಹ ರೂಪಂ' ಹಾಡನ್ನು ಬಳಸುವಂತಿಲ್ಲ.
'ವರಾಹ ರೂಪಂ' ಹಾಡು ಬರೆದಿರುವ ಶಶಿರಾಜ್ ಕಾವೂರ್ ಅವರೇ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ ಎನ್ನಲಾಗುತ್ತಿದೆ. ಅವರು ವಕೀಲರೂ ಆಗಿದ್ದಾರೆ. ಕೋಳಿಕ್ಕೊಡ್ ಜಿಲ್ಲಾ ನ್ಯಾಯಾಲಯದಲ್ಲಿ ದೊರಕಿರುವ ಗೆಲುವು ಚಿತ್ರತಂಡಕ್ಕೆ ಬಹಳ ಖುಷಿ ನೀಡಿದೆ. ಗೋವಾದಿಂದ ದೆಹಲಿಗೆ ಹೋಗುತ್ತಿದ್ದ ರಿಷಬ್ ಶೆಟ್ಟಿ ಕರೆ ಮಾಡಿ ಖುಷಿ ವ್ಯಕ್ತಪಡಿಸಿದರು ಎಂದಿದ್ದಾರೆ ಶಶಿರಾಜ್.
ದೇವರು, ದೈವಗಳ ಆಶೀರ್ವಾದದಿಂದ ಈಗ ಒಂದು ಗೆಲುವು ದೊರಕಿದೆ. ಪಾಲಕ್ಕಾಡ್ ನ್ಯಾಯಾಲಯದಲ್ಲಿಯೂ ಗೆಲುವು ನಮ್ಮದೇ ಆಗುವ ವಿಶ್ವಾಸವಿದೆ. ಪಾಲಕ್ಕಾಡ್ ನ್ಯಾಯಾಲಯದಲ್ಲಿ ಗೆಲುವು ಧಕ್ಕಿದರೆ 'ವರಾಹ ರೂಪಂ' ಹಾಡನ್ನು ಈ ಹಿಂದಿನಂತೆ ಬಳಸಲಾಗುತ್ತದೆ ಎಂದಿದ್ದಾರೆ ಶಶಿರಾಜ್.