Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಚಿತ್ರದ ವಸ್ತ್ರಾಪಹರಣದ ಹಾಡು ಬಿಡುಗಡೆ
Recommended Video
ಮಹಾಭಾರತದ ಮಹತ್ವದ ಸನ್ನಿವೇಶ ವಸ್ತ್ರಾಪಹರಣ. 'ಕುರುಕ್ಷೇತ್ರ' ಸಿನಿಮಾದ ಈ ಸನ್ನಿವೇಶದ ಹಾಡು ಬಿಡುಗಡೆಯಾಗಿದೆ.
'ಕುರುಕ್ಷೇತ್ರ' ಸಿನಿಮಾದ ಮೂರನೇ ಹಾಡು ಇದಾಗಿದೆ. ಹಾಡಿನ ಮೂಲಕ ದ್ರೌಪದಿ ಪಾತ್ರದ ಸ್ನೇಹ ರಕ್ಷಣೆಗಾಗಿ ಶ್ರೀಕೃಷ್ಣನನ್ನು ಪ್ರಾರ್ಥನೆ ಮಾಡುತ್ತಾರೆ. ರವಿಚಂದ್ರನ್ ಶ್ರೀಕೃಷ್ಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮಯೂರ, ಬಬ್ರುವಾಹನ ಚಿತ್ರದ ಬಗ್ಗೆ ದರ್ಶನ್ ಹೇಳಿದ ಮಾತಿದು
ಈ ಹಾಡಿನ ಯೂಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದಾರೆ. ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. 'ಎಲ್ಲಿರುವೇ ಹರಿಯೇ...' ಹಾಡಿಗೆ ಸದ್ಯ 1 ಲಕ್ಷಕ್ಕೂ ಹೆಚ್ಚು ಹಿಟ್ಸ್ ಸಿಕ್ಕಿದೆ.
ಮೊದಲನೇ ಹಾಡು ದುರ್ಯೋಧನನ ಕುರಿತು, ಕೌರವನ ವ್ಯಕ್ತಿತ್ವವನ್ನ ವೈಭವಿಕರಿಸುವಂತಿತ್ತು. ಎರಡನೇ ಹಾಡು ದುರ್ಯೋಧನ ಮತ್ತು ಭಾನುಮತಿ ನಡುವಿನ ರೋಮ್ಯಾಂಟಿಕ್ ಗೀತೆಯಾಗಿತ್ತು. ಮೂರನೇ ಹಾಡು ದ್ರೌಪದಿ ವಸ್ತ್ರಾಪಹರಣದ ವೇಳೆ ಶ್ರೀಕೃಷ್ಣನಿಗಾಗಿ ದ್ರೌಪದಿ ಮನವಿ ಮಾಡುವ ಶೋಕ ಗೀತೆಯಾಗಿದೆ.
ದ್ರೌಪದಿ ಪಾತ್ರದಲ್ಲಿ ಬಹುಭಾಷಾ ನಟಿ ಸ್ನೇಹಾ ನಟಿಸಿದ್ದು, ಪಾಂಡವರಾಗಿ ಶಶಿಕುಮಾರ್ (ಧರ್ಮರಾಯ), ಸೋನು ಸೂದ್ (ಅರ್ಜುನ), ಡ್ಯಾನಿಶ್ ಅಖ್ತರ್ (ಭೀಮ) ನಕುಲ ಮತ್ತು ಸಹದೇವನ ಪಾತ್ರದಲ್ಲಿ ಚಂದನ್ ಕುಮಾರ್ ಮತ್ತು ಯಶಸ್ ಸೂರ್ಯ ನಟಿಸಿದ್ದಾರೆ.
ನಾಗಣ್ಣ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಮುನಿರತ್ನ ಬಂಡವಾಳ ಹಾಕಿದ್ದಾರೆ. ಆಗಸ್ಟ್ 2 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ
ಹಾಡು ನೋಡಲು ಇಲ್ಲಿ ಕ್ಲಿಕ್ ಮಾಡಿ