Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಚಿತ್ರದ ವಸ್ತ್ರಾಪಹರಣದ ಹಾಡು ಬಿಡುಗಡೆ
Recommended Video
ಮಹಾಭಾರತದ ಮಹತ್ವದ ಸನ್ನಿವೇಶ ವಸ್ತ್ರಾಪಹರಣ. 'ಕುರುಕ್ಷೇತ್ರ' ಸಿನಿಮಾದ ಈ ಸನ್ನಿವೇಶದ ಹಾಡು ಬಿಡುಗಡೆಯಾಗಿದೆ.
'ಕುರುಕ್ಷೇತ್ರ' ಸಿನಿಮಾದ ಮೂರನೇ ಹಾಡು ಇದಾಗಿದೆ. ಹಾಡಿನ ಮೂಲಕ ದ್ರೌಪದಿ ಪಾತ್ರದ ಸ್ನೇಹ ರಕ್ಷಣೆಗಾಗಿ ಶ್ರೀಕೃಷ್ಣನನ್ನು ಪ್ರಾರ್ಥನೆ ಮಾಡುತ್ತಾರೆ. ರವಿಚಂದ್ರನ್ ಶ್ರೀಕೃಷ್ಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮಯೂರ, ಬಬ್ರುವಾಹನ ಚಿತ್ರದ ಬಗ್ಗೆ ದರ್ಶನ್ ಹೇಳಿದ ಮಾತಿದು
ಈ ಹಾಡಿನ ಯೂಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದಾರೆ. ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. 'ಎಲ್ಲಿರುವೇ ಹರಿಯೇ...' ಹಾಡಿಗೆ ಸದ್ಯ 1 ಲಕ್ಷಕ್ಕೂ ಹೆಚ್ಚು ಹಿಟ್ಸ್ ಸಿಕ್ಕಿದೆ.
ಮೊದಲನೇ ಹಾಡು ದುರ್ಯೋಧನನ ಕುರಿತು, ಕೌರವನ ವ್ಯಕ್ತಿತ್ವವನ್ನ ವೈಭವಿಕರಿಸುವಂತಿತ್ತು. ಎರಡನೇ ಹಾಡು ದುರ್ಯೋಧನ ಮತ್ತು ಭಾನುಮತಿ ನಡುವಿನ ರೋಮ್ಯಾಂಟಿಕ್ ಗೀತೆಯಾಗಿತ್ತು. ಮೂರನೇ ಹಾಡು ದ್ರೌಪದಿ ವಸ್ತ್ರಾಪಹರಣದ ವೇಳೆ ಶ್ರೀಕೃಷ್ಣನಿಗಾಗಿ ದ್ರೌಪದಿ ಮನವಿ ಮಾಡುವ ಶೋಕ ಗೀತೆಯಾಗಿದೆ.
ದ್ರೌಪದಿ ಪಾತ್ರದಲ್ಲಿ ಬಹುಭಾಷಾ ನಟಿ ಸ್ನೇಹಾ ನಟಿಸಿದ್ದು, ಪಾಂಡವರಾಗಿ ಶಶಿಕುಮಾರ್ (ಧರ್ಮರಾಯ), ಸೋನು ಸೂದ್ (ಅರ್ಜುನ), ಡ್ಯಾನಿಶ್ ಅಖ್ತರ್ (ಭೀಮ) ನಕುಲ ಮತ್ತು ಸಹದೇವನ ಪಾತ್ರದಲ್ಲಿ ಚಂದನ್ ಕುಮಾರ್ ಮತ್ತು ಯಶಸ್ ಸೂರ್ಯ ನಟಿಸಿದ್ದಾರೆ.
ನಾಗಣ್ಣ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಮುನಿರತ್ನ ಬಂಡವಾಳ ಹಾಕಿದ್ದಾರೆ. ಆಗಸ್ಟ್ 2 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ
ಹಾಡು ನೋಡಲು ಇಲ್ಲಿ ಕ್ಲಿಕ್ ಮಾಡಿ