Don't Miss!
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತಸಾಹಿತಿ ಕವಿರಾಜ್ ಅವರಿಗೆ ಹ್ಯಾಟ್ರಿಕ್ ಸಂಭ್ರಮ
ಕನ್ನಡ ಚಿತ್ರರಂಗದ ಜನಪ್ರಿಯ ಗೀತಸಾಹಿತಿ ಕವಿರಾಜ್ ಅವರು ಹ್ಯಾಟ್ರಿಕ್ ಸಂಭ್ರಮದಲ್ಲಿ ತೇಲಾಡುತ್ತಿದ್ದಾರೆ. ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ಮಿರ್ಚಿ ಮ್ಯೂಸಿಕ್ ಅವಾರ್ಡ್ ನಲ್ಲಿ ಅವರು ಅತ್ಯುತ್ತಮ ಗೀತರಚನೆಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಾಲೆಂಜಿಂಗ್
ಸ್ಟಾರ್
ದರ್ಶನ್
ಅಭಿನಯದ
'ಬುಲ್
ಬುಲ್'
ಚಿತ್ರದ
"ಜಗದಲ್ಲಿರೋ
ಹುಚ್ಚರಲಿ
ನಾನು
ಒಬ್ಬ"
ಹಾಡಿಗೆ
2013ನೇ
ಸಾಲಿನ
ವರ್ಷದ
ಅತ್ಯುತ್ತಮ
ಗೀತರಚನೆಕಾರ
ಪ್ರಶಸ್ತಿ
ದೊರಕಿದೆ.
ಇದಕ್ಕೂ
ಮುನ್ನ
ಅವರು
2009,
2011ರಲ್ಲೂ
ಮಿರ್ಚಿ
ಮ್ಯೂಸಿಕ್
ಅವಾರ್ಡ್
ಪ್ರಶಸ್ತಿ
ಪಡೆದಿದ್ದರು.
[ಬದುಕಿನ
ಹೊಸ
ಅಧ್ಯಾಯ
ಆರಂಭಿಸಿದ
ಕವಿರಾಜ್]
ಬುಲ್ ಬುಲ್ ಚಿತ್ರದ ಎಲ್ಲಾ ಹಾಡುಗಳನ್ನೂ ಕವಿರಾಜ್ ಅವರೇ ಬರೆದಿದ್ದಾರೆ. ಅವರು ಬರೆದಿರುವ 'ಮೈನಾ' ಚಿತ್ರವೂ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಈ ಪ್ರಶಸ್ತಿಗಳು ಸಹಜವಾಗಿ ಕವಿರಾಜ್ ಅವರ ಖುಷಿಯನ್ನು ಇಮ್ಮಡಿಗೊಳಿಸಿದೆ.
ಪ್ರೇಮ್ ನಿರ್ದೇಶನದ 'ಕರಿಯ' (2003) ಚಿತ್ರದ "ನನ್ನಲಿ ನಾನಿಲ್ಲ, ಮನದಲಿ ಏನಿಲ್ಲ.." ಎಂಬ ಗೀತೆಯ ಮೂಲಕ ಚಿತ್ರರಂಗಕ್ಕೆ ಅಡಿಯಿಟ್ಟ ಕವಿರಾಜ್ ಅನತಿಕಾಲದಲ್ಲೇ ಖ್ಯಾತಿಯ ಉತ್ತುಂಗಕ್ಕೆ ತಲುಪಿದರು. ಅವರ ಲೇಖನಿಯಿಂದ ಪದೇಪದೇ ಗುನುಗುವಂತಹ ಹಲವಾರು ಗೀತೆಗಳು ಹೊರಹೊಮ್ಮಿವೆ.
ಕಣಕಣದೇ ಶಾರದೆ (ಆಪ್ತಮಿತ್ರ), ಜಿನುಜಿನುಗೋ ಜೇನಾ ಹನಿ (ಕಂಠಿ), ಸೂರ್ಯ ತಂಪು ಸೂಸು, ಗಾಳಿ ಮೆಲ್ಲ ಬೀಸು (ಸಿದ್ದು), ಗಗನವೆ ಬಾಗಿ (ಸಂಜು ವೆಡ್ಸ್ ಗೀತ), ನೀ ಓಡಿ ಬಂದಾಗ (ಶಿವ), ಪತ್ರ ಬರೆಯಲಾ ಚಿತ್ರ ಬಿಡಿಸಲಾ...(ಅರಮನೆ), ಮೊದಮೊದಲು ಭುವಿಗಿಳಿದಾ ಮಳೆ ಹನಿಯು...(ಯಶವಂತ್) ಮುಂತಾದವು. (ಒನ್ಇಂಡಿಯಾ ಕನ್ನಡ)