Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಳ್ಳಾರಿಯಲ್ಲಿ ಪುನೀತ್ 'ಪವರ್'ಗೆ ಮಹೇಶ್ ಕರೆಂಟ್
ಪವರ್ ಸ್ಟಾರ್ ಪುನಿತ್ ರಾಜಕುಮಾರ್ ಅಭಿನಯದ 'ಪವರ್' ಚಿತ್ರದ ಧ್ವನಿಮುದ್ರಿಕೆ ಬಿಡುಗಡೆಗೆ ಬಳ್ಳಾರಿಯ ಮುನ್ಸಿಪಲ್ ಮೈದಾನ ಸಕಲ ರೀತಿಯಲ್ಲೂ ಸಜ್ಜಾಗಿದೆ. ತೆಲುಗು ಚಿತ್ರನಟ ಮಹೇಶ್ ಬಾಬು ಮತ್ತು ಚಿತ್ರದ ಹೀರೋ ಪುನೀತ್ ಶನಿವಾರ (ಜೂ.28) ಸಂಜೆ ಬಳ್ಳಾರಿಗೆ ಆಗಮಿಸಲಿದ್ದಾರೆ.
ಈಗಾಗಲೆ ಬಿಡುಗಡೆಯಾಗಿರುವ ಚಿತ್ರ ಟೀಸರ್ ಗೆ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ತೆಲುಗಿನ ಯಶಸ್ವಿ ಚಿತ್ರ 'ದೂಕುಡು' ಚಿತ್ರದ ರೀಮೇಕ್ ಇದಾಗಿದ್ದು ಕೆ ಮಹೇಶ್ ಆಕ್ಷನ್ ಕಟ್ ಹೇಳಿದ್ದಾರೆ. ಸ್ಪೈನ್, ಹೈದರಾಬಾದ್, ಮುಂಬೈ, ಸಂಡೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. [ದುಷ್ಮನ್ ಅಂದ್ರೆ ದೂಸ್ರಾ ಮಾತೇ ಇಲ್ಲ 'ಪವರ್' ಸ್ಟಾರ್]
ಆಡಿಯೋ ಬಿಡುಗಡೆಗೆ ನಾಯಕಿ ತ್ರಿಷಾ ಸೇರಿದಂತೆ ಚಿತ್ರದಲ್ಲಿ ಅಭಿನಯಿಸಿರುವ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ. ಅಂದಿನ ಸಮಾರಂಭಕ್ಕೆ ತೆಲುಗಿನ ಖ್ಯಾತ ನಟ ಸೂಪರ್ ಸ್ಟಾರ್ ಮಹೇಶ್ ಬಾಬು ಆಗಮಿಸುತ್ತಿರುವುದು ವಿಶೇಷ.
ಶ್ರೀನು ವೈಟ್ಲ ನಿರ್ದೇಶನದ 'ದೂಕುಡು' ಚಿತ್ರ ಬಾಕ್ಸ್ ಆಫೀಸಲ್ಲಿ ರು.100 ಕೋಟಿ ಗಳಿಸುವ ಮೂಲಕ ಟಾಲಿವುಡ್ ನಲ್ಲಿ ದಾಖಲೆ ನಿರ್ಮಿಸಿತ್ತು. ಹಳಿತಪ್ಪಿದ್ದ ಮಹೇಶ್ ಬಾಬು ಅವರ ವೃತ್ತಿಜೀವನದಲ್ಲಿ ಮಹತ್ತರ ತಿರುವು ನೀಡಿದ ಚಿತ್ರವಿದು. ನಂದಿ ಪ್ರಶಸ್ತಿ ಸೇರಿದಂತೆ ಫಿಲಂಫೇರ್ ಪ್ರಶಸ್ತಿಗಳಿಗೆ ಚಿತ್ರ ಪಾತ್ರವಾಗಿದೆ.
ಈ ಹಿಂದೆ ಮಹೇಶ್ ಬಾಬು ಅಭಿನಯದ 'ಒಕ್ಕಡು' ಚಿತ್ರ 'ಅಜಯ್' ಆಗಿ ಕನ್ನಡಕ್ಕೆ ರೀಮೇಕ್ ಆಗಿತ್ತು. ತೆಲುಗಿನ ಮತ್ತೊಂದು ಚಿತ್ರ 'ರೆಡಿ' ಕನ್ನಡಕ್ಕೆ 'ರಾಮ್' ಆಗಿ ರೀಮೇಕ್ ಆಗಿತ್ತು. ಈಗ ದೂಕುಡು ಚಿತ್ರದ ಸರದಿ.
ಐದು ಹಾಡುಗಳಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಸ್.ಎಸ್.ತಮನ್ ಸಂಗೀತ ನೀಡುತ್ತಿದ್ದಾರೆ. ಕನ್ನಡದಲ್ಲಿ ಇದು ಅವರ ಪ್ರಥಮ ಚಿತ್ರ. ಕೃಷ್ಣಕುಮಾರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಎಂ.ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ. ಕೆ.ಎಸ್.ಚಂಪಕಧಾಮ (ಬಾಬು), ಎಸ್.ಕುಮಾರ್ ನಿರ್ಮಾಣ ನಿರ್ವಹಣೆ ಮಾಡುತ್ತಿದ್ದಾರೆ. (ಒನ್ಇಂಡಿಯಾ ಕನ್ನಡ)