Don't Miss!
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಎದೆ ನೋವು: ಆಸ್ಪತ್ರೆಗೆ ದಾಖಲು
ಸಂಗೀತ ಪ್ರಿಯರಿಗೆ ಮತ್ತು ಕನ್ನಡ ಸಿನಿ ಪ್ರಿಯರಿಗೆ ಶಾಕಿಂಗ್ ನ್ಯೂಸ್ ವೊಂದು ಸಿಕ್ಕಿದೆ. ಗ್ಯಾಸ್ಟ್ರಿಕ್ ಮತ್ತು ಕಾರ್ಡಿಯಾಕ್ ಸಮಸ್ಯೆಯಿಂದ ಬಳಲುತ್ತಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೈಸೂರಿನ ನಿವಾಸದಲ್ಲಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಕಳೆದ ಭಾನುವಾರ ತೀವ್ರ ಎದೆ ನೋವು, ಬೆನ್ನು ನೋವು, ತಲೆ ನೋವು, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ಅರ್ಜುನ್ ಜನ್ಯ ದಾಖಲಾದರು.
ಮೈಸೂರಿನ ಹೊರವಲಯದಲ್ಲಿ ಐಷಾರಾಮಿ ವಿಲ್ಲಾವೊಂದನ್ನು ಅರ್ಜುನ್ ಜನ್ಯ ಖರೀದಿ ಮಾಡಿದ್ದಾರೆ. ಆಗಾಗ ಮೈಸೂರಿಗೆ ಬಂದು ಹೋಗುತ್ತಿರುವ ಅರ್ಜುನ್ ಜನ್ಯ, ಕಳೆದ ಭಾನುವಾರ ಕೂಡ ಮೈಸೂರಿನ ತಮ್ಮ ವಿಲ್ಲಾದಲ್ಲಿ ತಂಗಿದ್ದರು. ಇದ್ದಕ್ಕಿದ್ದಂತೆ ಅರ್ಜುನ್ ಜನ್ಯಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕನ್ನಡ ಚಿತ್ರರಂಗದ ಬಹು ಬೇಡಿಕೆಯ ಸಂಗೀತ ನಿರ್ದೇಶಕರ ಪೈಕಿ ಅರ್ಜುನ್ ಜನ್ಯ ಕೂಡ ಒಬ್ಬರು. 'ಬಿರುಗಾಳಿ', 'ಕೆಂಪೇಗೌಡ', 'ರಾಂಬೋ', 'ಅಲೆಮಾರಿ', 'ಲಕ್ಕಿ', 'ಭಜರಂಗಿ', 'ಸ್ವೀಟಿ ನನ್ ಜೋಡಿ', 'ಅಧ್ಯಕ್ಷ', 'ಮಾಣಿಕ್ಯ', 'ವಜ್ರಕಾಯ', 'ಮುಕುಂದ ಮುರಾರಿ', 'ಚಕ್ರವರ್ತಿ' ಸೇರಿದಂತೆ ಹಲವು ಹಿಟ್ ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ನೀಡಿದ ಖ್ಯಾತಿ ಅರ್ಜುನ್ ಜನ್ಯ ಅವರಿಗೆ ಸಲ್ಲಬೇಕು.
ಸದ್ಯ 'ಕೋಟಿಗೊಬ್ಬ-3', 'ಮದಗಜ', 'ರಾಬರ್ಟ್' ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ ಅರ್ಜುನ್ ಜನ್ಯ ಖಾಸಗಿ ವಾಹಿನಿಯ ಸಿಂಗಿಂಗ್ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿದ್ದಾರೆ.