Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ ಸೇತುಪತಿ ಸಿನಿಮಾದ ಮೇಲೆ ದೂರು ನೀಡಿದ ಇಳಯರಾಜ
ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ, ವಿಜಯ್ ಸೇತುಪತಿ ನಟಿಸುತ್ತಿರುವ ಹೊಸ ಸಿನಿಮಾ 'ಕಡೈಸಿ ವಿವಸಾಯಿ' ಸಿನಿಮಾದ ವಿರುದ್ಧ ಸಂಗೀತ ನಿರ್ದೇಶಕರ ಸಂಘಕ್ಕೆ ದೂರು ದಾಖಲಿಸಿದ್ದಾರೆ.
'ಕಡೈಸಿ ವಿವಾಸಾಯಿ' ಚಿತ್ರತಂಡವು ನನ್ನ ಗಮನಕ್ಕೆ ತರದೆ ನಾನು ನೀಡಿದ್ದ ಹಿನ್ನೆಲೆ ಸಂಗೀತವನ್ನು ಕೈಬಿಟ್ಟಿದೆ. ಅಲ್ಲದೆ ನನಗೆ ಮಾಹಿತಿ ನೀಡದೆ ಬೇರೆ ಸಂಗೀತ ನಿರ್ದೇಶಕರನ್ನು ತೆಗೆದುಕೊಂಡಿದೆ ಎಂದು ಇಳಯರಾಜ ದೂರಿದ್ದಾರೆ.
'ಕಡೈಸಿ ವಿವಸಾಯಿ' ಸಿನಿಮಾಕ್ಕೆ ಇಳಯರಾಜ ಸಂಗೀತ ನೀಡಿದ್ದರು. ಆದರೆ ಅವರು ನೀಡಿದ್ದ ಸಂಗೀತ ಸಿನಿಮಾದ ನಿರ್ದೇಶಕ ಎಂ ಮಣಿಕಂಠನ್ಗೆ ಇಷ್ಟವಾಗಿಲ್ಲ. ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶಕ ಸೂಚಿಸಿದ್ದಾರೆ. ಆದರೆ ಇದಕ್ಕೆ ಇಳಯರಾಜ ಒಪ್ಪಿಲ್ಲ. ಹಾಗಾಗಿ ಅವರು ನೀಡಿದ ಹಿನ್ನೆಲೆ ಸಂಗೀತವನ್ನು ಕೈಬಿಟ್ಟು, ಸಂತೋಷ್ ನಾರಾಯಣ್ ಹಾಗೂ ರಿಚರ್ಡ್ ಹಾರ್ವಿ ಅವರಿಂದ ಹಿನ್ನೆಲೆ ಸಂಗೀತ ಕೊಡಿಸಿದ್ದಾರೆ. ಇದು ಇಳಯರಾಜ ಆಕ್ರೋಶಕ್ಕೆ ಕಾರಣವಾಗಿದೆ.
'ಕಡೈಸಿ ವಿವಸಾಯಿ' ಸಿನಿಮಾವು ಕೃಷಿ ಕುರಿತ ಸಿನಿಮಾ ಆಗಿದ್ದು, ಸಿನಿಮಾವನ್ನು ಅಲಿರಾಜ ಸುಭಾಸ್ಕರನ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ನಲ್ಲಂದಿ, ಯೋಗಿ ಬಾಬು, ಮುನೀಶ್ವರನ್ ಹಾಗೂ ಇತರರು ನಟಿಸಿದ್ದಾರೆ. ಸಿನಿಮಾದಲ್ಲಿ ವಿಜಯ್ ಸೇತುಪತಿ ಸಹ ನಟಿಸಿದ್ದಾರೆ. ಸಿನಿಮಾ 2018 ರಲ್ಲಿಯೇ ಘೋಷಣೆ ಆಗಿದೆ. ಸಿನಿಮಾದ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿದಿದ್ದು, ಮುಂದಿನ ತಿಂಗಳು ಬಿಡಗುಡೆ ಆಗಲಿದೆ.