Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ ಹಬ್ಬಕ್ಕೆ ಬೆಂಗಳೂರಿನಲ್ಲಿ ಇಳಯರಾಜ ರಸಸಂಜೆ
ಸಂಗೀತ ಕಲಾಭಿಜ್ಞ ಇಳಯರಾಜ ಅವರು ಒಟ್ಟು 100 ಮಂದಿಯ ತಂಡದೊಂದಿಗೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅವರ ವೃತ್ತಿಜೀವದಲ್ಲೇ ಇದು ಅತ್ಯಂತ ದೊಡ್ಡ ಶೋ. ಇದರ ಜೊತೆ ಶಾಸ್ತ್ರೀಯ, ಹಿಂದೂಸ್ತಾನಿ, ಸುಗಮ ಸಂಗೀತ, ಭಕ್ತಿ ಸಂಗೀತ, ಪಾಶ್ಚಿಮಾತ್ಯ ಹಾಗೂ ಮೆಲೋಡಿ ಮುಂತಾದ ರಸಸಂಜೆ ಕಾರ್ಯಕ್ರಮಗಳು ನಡೆಯಲಿವೆ.
ಇಳಯರಾಜ ಅವರ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ವಿ ಹರಿಕೃಷ್ಣ, ಸೋನು ನಿಗಮ್, ಶಿವಮಣಿ, ಶಂಕರ್ ಮಹದೇವನ್, ದೇವಿಶ್ರೀ ಪ್ರಸಾದ್ ಮುಂತಾದವರು ಕೈಜೋಡಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ 500ಕ್ಕೂ ಹೆಚ್ಚು ನೃತ್ಯ ಕಲಾವಿದರು ಡಾನ್ಸ್ ಮಾಡಲಿದ್ದಾರೆ.
ಭರತ ನಾಟ್ಯ, ಕಥಕ್, ಒಡಿಸ್ಸಿ, ಯಕ್ಷಗಾನ, ಮೋಹಿನಿ ಆಟ್ಟಂ ಹಾಗೂ ಕೂಚಿಪೂಡಿ ಶೈಲಿಯ ನೃತ್ಯಪ್ರಕಾರಗಳಲ್ಲಿ ಕಲಾವಿದರು ನರ್ತಿಸಲಿದ್ದಾರೆ. ಈ ನಯನ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಬೇಕು ಎಂದರೆ ಡಿವಿಜಿ ರಸ್ತೆಗೆ ಬರಬೇಕು. ಅಂದು ಸಂಜೆ 6.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಇದಾದ ಬಳಿಕ ಇಳಯರಾಜ ಸಂಗೀತ ಸಂಜೆ ಇರುತ್ತದೆ.
ಇದೇ ಸಂದರ್ಭದಲ್ಲಿ 101 ಮಂದಿ ಬಾಣಸಿಗರು ಸಿದ್ಧಪಡಿಸಿದ 6,000 ಕೆಜಿಯ ಲಡ್ಡು ತಯಾರಿಸಲಿದ್ದಾರೆ. ಈ ಭಾರಿ ಗಾತ್ರದ ಲಡ್ಡು ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಈ ಲಡ್ಡುವನ್ನು ಬಳಿಕ ಪ್ರಸಾದ ರೂಪದಲ್ಲಿ ಭಕ್ತಾದಿಗಳಿಗೆ ವಿತರಿಸಲಾಗುತ್ತದೆ.
ಹನ್ನೊಂದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ ಕರ್ನಾಟಕದ ವೈವಿಧ್ಯಭರಿತ ತಿಂಡಿ ತಿನಿಸುಗಳು. ಆರು ಜಿಲ್ಲೆಗಳ 125 ವಿವಿಧ ಭಕ್ಷ್ಯಗಳನ್ನು ನಾಲಿಗೆ ಚಪ್ಪರಿಸುತ್ತಾ ಸವಿಯಬಹುದು. ಇದಿಷ್ಟೇ ಅಲ್ಲದೆ ಇನ್ನೂ ಅನೇಕ ಕಾರ್ಯಕ್ರಮಗಳು ಕಣ್ಮನ ಸೂರೆಗೊಳಿಸಲಿವೆ. ತಪ್ಪದೆ ಬನ್ನಿ. (ಒನ್ಇಂಡಿಯಾ ಕನ್ನಡ)