Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರಿಸ್ ಮಸ್ ಗೆ ಭಟ್ಟರ ಹಾಡು, ಹೊಸ ವರ್ಷಕ್ಕೆ ಅಪ್ಪು ಸಾಂಗ್
Recommended Video
ಹೊಸ ವರ್ಷದ ಆಚರಣೆಗೆ ಇನ್ನು ಏಳು ದಿನ ಬಾಕಿ ಇದೆ. ಎಲ್ಲರೂ ಹೊಸ ವರ್ಷದ ಆಚರಣೆಗೆ ಸಿಕ್ಕಾಪಟ್ಟೆ ಪ್ಲಾನ್ ಮಾಡುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಯೋಗರಾಜ್ ಭಟ್ ಹಾಗೂ ಪುನೀತ್ ರಾಜ್ ಕುಮಾರ್ ಕಡೆಯಿಂದ ಉಡುಗೊರೆ ಸಿಗಲಿದೆ.
ಕ್ರಿಸ್ ಮಸ್ ಗೆ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ' ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ. 'ಶೃಂಗಾರದ ಹೊಂಗೆ ಮರ ಹೂ ಬಿಟ್ಟಿದೆ..' ಎಂಬ ಹಾಡು ಡಿಸೆಂಬರ್ 25ಕ್ಕೆ ಬಿಡುಗಡೆಯಾಗುತ್ತದೆ. ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದು, ಹರಿಕೃಷ್ಣ ಸಂಗೀತ ನೀಡಿದ್ದಾರೆ. ಯೋಗರಾಜ್ ಭಟ್ ಈ ಹಾಡನ್ನು ಬರೆದಿದ್ದಾರೆ.
"ಶೃಂಗಾರದ ಹೊಂಗೆಮರ" single video is on the way... 25ನೇ ತಾರೀಖು. ಅದರ Small Audio Bit ಶೇರ್ ಮಾಡಕ್ಕೆ ತುಂಬಾ ಹೆಮ್ಮೆ ಮತ್ತು ಖುಷಿಯಾಗ್ತಿದೆ. pic.twitter.com/yTMzp9IlG1
— Yogaraj Bhat (@yogarajofficial) December 22, 2018
ಇನ್ನೊಂದು ಕಡೆ ಪುನೀತ್ ರಾಜ್ ಕುಮಾರ್ ಅಭಿನಯದ 'ನಟ ಸಾರ್ವಭೌಮ' ಚಿತ್ರದ ಮೊದಲ ಹಾಡು ಕೂಡ ರಿಲೀಸ್ ಗೆ ಸಿದ್ಧವಾಗಿದೆ. ಡಿಸೆಂಬರ್ 30 ರಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿದೆ. ನ್ಯೂ ಇಯರ್ ಪಾರ್ಟಿಗೆ ಸರಿಯಾಗಿ ಈ ಚಿತ್ರದ ಪಾರ್ಟಿ ಸಾಂಗ್ ರಿಲೀಸ್ ಆಗುತ್ತಿದೆ.
ಡಿ ಇಮಾನ್ ಸಂಗೀತ ನೀಡಿದ್ದಾರೆ. 'ಒಪನ್ ದಿ ಬಾಟಲ್..' ಎಂಬ ಹಾಡು ಚಿತ್ರದ ಮೊದಲ ಹಾಡಾಗಿದೆ. ಪವನ್ ಒಡೆಯರ್ ಈ ಚಿತ್ರದ ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.