ಕ್ರಿಸ್ ಮಸ್ ಗೆ ಭಟ್ಟರ ಹಾಡು, ಹೊಸ ವರ್ಷಕ್ಕೆ ಅಪ್ಪು ಸಾಂಗ್
Recommended Video

ಹೊಸ ವರ್ಷದ ಆಚರಣೆಗೆ ಇನ್ನು ಏಳು ದಿನ ಬಾಕಿ ಇದೆ. ಎಲ್ಲರೂ ಹೊಸ ವರ್ಷದ ಆಚರಣೆಗೆ ಸಿಕ್ಕಾಪಟ್ಟೆ ಪ್ಲಾನ್ ಮಾಡುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಯೋಗರಾಜ್ ಭಟ್ ಹಾಗೂ ಪುನೀತ್ ರಾಜ್ ಕುಮಾರ್ ಕಡೆಯಿಂದ ಉಡುಗೊರೆ ಸಿಗಲಿದೆ.
ಕ್ರಿಸ್ ಮಸ್ ಗೆ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ' ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ. 'ಶೃಂಗಾರದ ಹೊಂಗೆ ಮರ ಹೂ ಬಿಟ್ಟಿದೆ..' ಎಂಬ ಹಾಡು ಡಿಸೆಂಬರ್ 25ಕ್ಕೆ ಬಿಡುಗಡೆಯಾಗುತ್ತದೆ. ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದು, ಹರಿಕೃಷ್ಣ ಸಂಗೀತ ನೀಡಿದ್ದಾರೆ. ಯೋಗರಾಜ್ ಭಟ್ ಈ ಹಾಡನ್ನು ಬರೆದಿದ್ದಾರೆ.
ಇನ್ನೊಂದು ಕಡೆ ಪುನೀತ್ ರಾಜ್ ಕುಮಾರ್ ಅಭಿನಯದ 'ನಟ ಸಾರ್ವಭೌಮ' ಚಿತ್ರದ ಮೊದಲ ಹಾಡು ಕೂಡ ರಿಲೀಸ್ ಗೆ ಸಿದ್ಧವಾಗಿದೆ. ಡಿಸೆಂಬರ್ 30 ರಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿದೆ. ನ್ಯೂ ಇಯರ್ ಪಾರ್ಟಿಗೆ ಸರಿಯಾಗಿ ಈ ಚಿತ್ರದ ಪಾರ್ಟಿ ಸಾಂಗ್ ರಿಲೀಸ್ ಆಗುತ್ತಿದೆ.

ಡಿ ಇಮಾನ್ ಸಂಗೀತ ನೀಡಿದ್ದಾರೆ. 'ಒಪನ್ ದಿ ಬಾಟಲ್..' ಎಂಬ ಹಾಡು ಚಿತ್ರದ ಮೊದಲ ಹಾಡಾಗಿದೆ. ಪವನ್ ಒಡೆಯರ್ ಈ ಚಿತ್ರದ ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.


Click it and Unblock the Notifications











