Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರಿಸ್ ಮಸ್ ಗೆ ಭಟ್ಟರ ಹಾಡು, ಹೊಸ ವರ್ಷಕ್ಕೆ ಅಪ್ಪು ಸಾಂಗ್
Recommended Video
ಹೊಸ ವರ್ಷದ ಆಚರಣೆಗೆ ಇನ್ನು ಏಳು ದಿನ ಬಾಕಿ ಇದೆ. ಎಲ್ಲರೂ ಹೊಸ ವರ್ಷದ ಆಚರಣೆಗೆ ಸಿಕ್ಕಾಪಟ್ಟೆ ಪ್ಲಾನ್ ಮಾಡುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಯೋಗರಾಜ್ ಭಟ್ ಹಾಗೂ ಪುನೀತ್ ರಾಜ್ ಕುಮಾರ್ ಕಡೆಯಿಂದ ಉಡುಗೊರೆ ಸಿಗಲಿದೆ.
ಕ್ರಿಸ್ ಮಸ್ ಗೆ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ' ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ. 'ಶೃಂಗಾರದ ಹೊಂಗೆ ಮರ ಹೂ ಬಿಟ್ಟಿದೆ..' ಎಂಬ ಹಾಡು ಡಿಸೆಂಬರ್ 25ಕ್ಕೆ ಬಿಡುಗಡೆಯಾಗುತ್ತದೆ. ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದು, ಹರಿಕೃಷ್ಣ ಸಂಗೀತ ನೀಡಿದ್ದಾರೆ. ಯೋಗರಾಜ್ ಭಟ್ ಈ ಹಾಡನ್ನು ಬರೆದಿದ್ದಾರೆ.
"ಶೃಂಗಾರದ ಹೊಂಗೆಮರ" single video is on the way... 25ನೇ ತಾರೀಖು. ಅದರ Small Audio Bit ಶೇರ್ ಮಾಡಕ್ಕೆ ತುಂಬಾ ಹೆಮ್ಮೆ ಮತ್ತು ಖುಷಿಯಾಗ್ತಿದೆ. pic.twitter.com/yTMzp9IlG1
— Yogaraj Bhat (@yogarajofficial) December 22, 2018
ಇನ್ನೊಂದು ಕಡೆ ಪುನೀತ್ ರಾಜ್ ಕುಮಾರ್ ಅಭಿನಯದ 'ನಟ ಸಾರ್ವಭೌಮ' ಚಿತ್ರದ ಮೊದಲ ಹಾಡು ಕೂಡ ರಿಲೀಸ್ ಗೆ ಸಿದ್ಧವಾಗಿದೆ. ಡಿಸೆಂಬರ್ 30 ರಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿದೆ. ನ್ಯೂ ಇಯರ್ ಪಾರ್ಟಿಗೆ ಸರಿಯಾಗಿ ಈ ಚಿತ್ರದ ಪಾರ್ಟಿ ಸಾಂಗ್ ರಿಲೀಸ್ ಆಗುತ್ತಿದೆ.
ಡಿ ಇಮಾನ್ ಸಂಗೀತ ನೀಡಿದ್ದಾರೆ. 'ಒಪನ್ ದಿ ಬಾಟಲ್..' ಎಂಬ ಹಾಡು ಚಿತ್ರದ ಮೊದಲ ಹಾಡಾಗಿದೆ. ಪವನ್ ಒಡೆಯರ್ ಈ ಚಿತ್ರದ ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ.