Don't Miss!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Sports
IND W vs WI W: ಭಾರತದ ಉತ್ತಮ ಆಲ್ರೌಂಡ್ ಪ್ರದರ್ಶನ: ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಹಂಸಲೇಖ-ಹರಿಕೃಷ್ಣ ಇಬ್ಬರಲ್ಲಿ ಯಾರು ಪ್ರತಿಭಾನ್ವಿತರು?
ಒಂದು ಲೆಕ್ಕದಲ್ಲಿ ಕನಸುಗಾರ ರವಿಚಂದ್ರನ್ ಚಿತ್ರಕ್ಕೆ ಹೊಸ ಆಯಾಮ ನೀಡಿದವರು ಹಂಸಲೇಖ ಅಂದರೆ ಅತಿಶಯೋಕ್ತಿ ಆಗಲಾರದು. ಜಾನಪದ ಶೈಲಿಯಿಂದ ಹಿಡಿದು ಎಲ್ಲಾ ರೀತಿಯ ಸಂಗೀತದಲ್ಲಿ ಪಳಗಿ ಒಂದು ಕಾಲದಲ್ಲಿ ಯುವ ಪೀಳಿಗೆಯ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು. ಇನ್ನು ಇತ್ತೀಚಿನ ಹೆಚ್ಚುಕಮ್ಮಿ ಎಲ್ಲಾ ಹಿಟ್ ಗೀತಗಳನ್ನು ನೀಡಿದವರಲ್ಲಿ ಹರಿಕೃಷ್ಣ ಅವರದ್ದು ಸಿಂಹಪಾಲು.
ಹಂಸಲೇಖ ಮತ್ತು ಹರಿಕೃಷ್ಣ ಈ ಇಬ್ಬರು ಸಂಗೀತ ನಿರ್ದೇಶಕರಲ್ಲಿ ಯಾರು ಪ್ರತಿಭಾನ್ವಿತರು? ಹಂಸಲೇಖ ಪ್ರತಿಭೆಗೆ ಹರಿಕೃಷ್ಣ ಸರಿದೂಗಬಲ್ಲರೇ? ಈ ಹೊಸ ಚರ್ಚೆಗೆ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಾಂದಿ ಹಾಡಿದ್ದಾರೆ. ಇತ್ತೀಚಿಗೆ ನಡೆದ ಸಮಾರಂಭವೊಂದರಲ್ಲಿ ನಮ್ಮ ಹರಿಕೃಷ್ಣ ಅವರು ಹಂಸಲೇಖಾ ಅವರ ಪ್ರತಿಭೆಗೆ ತೂಗಬಲ್ಲರಾದ ಸಂಗೀತ ನಿರ್ದೇಶಕರೆಂದು ಹಾಡಿ ಹೊಗಳಿದರು.
ಓದುಗ ಬಾಂಧವರಿಗೆ ತಿಳಿದಿರುವಂತೆ ಹರಿಕೃಷ್ಣ ಅವರು ಹಂಸಲೇಖ ಗರಡಿಯಲ್ಲೇ ಕೆಲಸ ಮಾಡಿ ಪಳಗಿದವರು. ಜೊತೆಜೊತೆಯಲಿ ಎನ್ನುವ ಸಿನಿಮಾದ ಮೂಲಕ ಸಂಗೀತ ನಿರ್ದೇಶಕನಾಗುವ ಅವಕಾಶ ಗಿಟ್ಟಿಸಿದ ಹರಿಕೃಷ್ಣ ಅದಾದ ಮೇಲೆ ಹಿಂದಿರುಗಿ ತಿರುಗಿ ನೋಡುವ ಪ್ರಮೇಯವೇ ಬಂದಿಲ್ಲ. ಅವರ ಬತ್ತಳಿಕೆಯಲ್ಲಿ ಸಾಲು ಸಾಲು ಹಿಟ್ ಗಳಿವೆ. ಇವತ್ತಿಗೂ ಬಹುನಿರೀಕ್ಷಿತ ಚಿತ್ರಗಳಿಗೆಲ್ಲಾ ಹರಿಕೃಷ್ಣ ಅವರೇ ಸಂಗೀತ ನಿರ್ದೇಶಕರು.
ವಾರಪೂರ್ತಿ ಬಿಡುವಿಲ್ಲದೆ ಕೆಲಸ ಮಾಡುತ್ತಿರುವ ಸದ್ಯದ ಜನಪ್ರಿಯ ಸಂಗೀತ ನಿರ್ದೇಶಕರೆಂದರೆ ಅದು ಹರಿಕೃಷ್ಣ ಮಾತ್ರ. ಇದನ್ನು ಎಲ್ಲರೂ ಒಪ್ಪಿಕೊಳ್ಳುವ ವಿಚಾರ. ಆದರೆ ಹಂಸಲೇಖ ಕುಳಿತು ಹೋದ ಸೀಟಿನಲ್ಲಿ ಪ್ರಸ್ತುತ ಇರುವ ಸಂಗೀತ ನಿರ್ದೇಶಕರನ್ನು ಹೋಲಿಸುವುದು ಸರಿಯಾದ ವಿಚಾರವೇ ಎನ್ನುವುದು.
ಯಾಕೆಂದರೆ ಹಂಸಲೇಖ ಬರೀ ಸಂಗೀತ ನಿರ್ದೇಶಕರಲ್ಲ. ಅವರ ಹಾಡಿನಲ್ಲಿ ಕಂಗೊಳಿಸುತ್ತಿದ್ದ ಸಾಹಿತ್ಯದ ಸಾಲುಗಳಲ್ಲಿ ಇಣುಕುತ್ತಿದ್ದದ್ದು ಅವರ ವಿದ್ವತ್. ಸಾಹಿತ್ಯವನ್ನು ತಾವೇ ರಚಿಸಿಕೊಂಡು ಅದಕ್ಕೆ ತಾನೇ ಸಂಗೀತ ಸಂಯೋಜಿಸುತ್ತಾ ಜೊತೆಗೆ ಆ ಹಾಡುಗಳ ಅತ್ಯಂತ ಜನಪ್ರಿಯವಾಗುವಂತೆ ನೋಡಿಕೊಂಡ ಗಾರುಡಿಗ ಹಂಸಲೇಖಾ.
ಅವರ ಸಂಗೀತದ ಮಾಧುರ್ಯದಷ್ಟೇ ಅವರ ಸಾಹಿತ್ಯವೂ ಅಧ್ಯಯನಕ್ಕೆ ಯೋಗ್ಯವಾದುದ್ದು. ಹಾಗಾಗಿ ಹಂಸಲೇಖಾ ಅವರ ಸ್ಥಾನವನ್ನು ಹರಿಕೃಷ್ಣ ಅವರು ತುಂಬುತ್ತಾರೆ ಅಂದದ್ದು ಬಹುತೇಕರಿಗೆ ಇಷ್ಟವಾಗದೆಯೂ ಇರಬಹುದು. ಹಾಡಿನ ಜನಪ್ರಿಯತೆ ವಿಚಾರದಲ್ಲಿ ಹೋಲಿಕೆ ಮಾಡುವುದಾದರೆ ಧೀರ ರಾಕ್ ಲೈನ್ ವೆಂಕಟೇಶ್ ಅವರ ಹೇಳಿಕೆಗೆ ಒಂದಷ್ಟು ಸಮ್ಮತಿಯೂ ಸಿಕ್ಕಿದರೂ ಸಿಗಬಹುದು.
ಹಂಸಲೇಖ, ಗುರುಕಿರಣ್, ಹರಿಕೃಷ್ಣ ಅವರ ಹಾಡನ್ನು ನಾವೆಲ್ಲರೂ ಕೇಳಿದ್ದೇವೆ. ಈ ಮೂವರಲ್ಲಿ ನಿಮಗೆ ಯಾರು ಹಿತವರು?