Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರ ಅಭಿಮಾನಿ 'ಕನಕ' ಸಾಂಗ್ ರೆಕಾರ್ಡಿಂಗ್ ಆರಂಭ
'ಕನಕ' ಅಣ್ಣಾವ್ರ ಅಭಿಮಾನಿ.... ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ಮತ್ತು ಆರ್.ಚಂದ್ರು ಕಾಂಬಿನೇಷನ್ ನಲ್ಲಿ ತಯಾರಾಗುತ್ತಿರುವ ಸಿನಿಮಾ. ಅಣ್ಣಾವ್ರ ಅಭಿಮಾನಿಯಾಗಿ ದುನಿಯಾ ವಿಜಯ್ ಕಾಣಿಸಿಕೊಳ್ಳುತ್ತಿರುವುದು ಈ ಚಿತ್ರದ ಪ್ರಮುಖ ಆಕರ್ಷಣೆ.
'ಲಕ್ಷ್ಮಣ' ಚಿತ್ರದ ನಂತರ ಮತ್ತೊಂದು ವಿಭಿನ್ನ ಕಥಾಹಂದರವುಳ್ಳ 'ಕನಕ' ಸಿನಿಮಾಗೆ ಕೈಹಾಕಿರುವ ನಿರ್ದೇಶಕ ಆರ್.ಚಂದ್ರು, ನಟ ವಿಜಯ್ ಅವರನ್ನು ವಿಶೇಷ ಪಾತ್ರದಲ್ಲಿ ತೋರಿಸುವ ಪ್ರಯತ್ನದಲ್ಲಿದ್ದಾರೆ. ತಮ್ಮ ಪ್ರತಿ ಚಿತ್ರದಲ್ಲೂ ನೈಜತೆಯತ್ತ ಹೆಚ್ಚು ಗಮನ ಹರಿಸುವ ಆರ್.ಚಂದ್ರು 'ಕನಕ' ಚಿತ್ರದಲ್ಲೂ ಅದನ್ನೇ ಮುಂದುವರೆಸಿದ್ದಾರೆ.['ಡಾ.ರಾಜ್ ಕುಮಾರ್ ಅಭಿಮಾನಿ' ಕುರಿತು ಆರ್ ಚಂದ್ರು ಹೊಸ ಸಿನಿಮಾ]
'ಲೂಸಿಯಾ' ಸಿನಿಮಾದ ಮೂಲಕ ಗಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾದ ನವೀನ್ ಸಜ್ಜು, 'ಕನಕ' ಚಿತ್ರದ ಮೂಲಕ ಚೊಚ್ಚಲ ಬಾರಿಗೆ ಸಂಗೀತ ನಿರ್ದೇಶನ ಮಾಡುತ್ತಿರುವುದು ಈ ಸಿನಿಮಾದ ಮತ್ತೊಂದು ವಿಶೇಷ.[ಆರ್ ಚಂದ್ರು ಚಿತ್ರದಲ್ಲಿ 'ರಾಜ್ ಕುಮಾರ್ ಫ್ಯಾನ್' ಯಾರು ಗೊತ್ತಾ?]
ಈಗಾಗಲೇ ಪ್ರಸಾದ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ರೆಕಾರ್ಡಿಂಗ್ ಕಾರ್ಯ ಆರಂಭಗೊಂಡಿದ್ದು, ತಮ್ಮ ಚೊಚ್ಚಲ ಸಂಗೀತ ನಿರ್ದೇಶನದಲ್ಲಿ ಅದ್ಭುತ ಹಾಡುಗಳನ್ನು ನೀಡಲು ನವೀನ್ ಸಜ್ಜು ತಯಾರಿ ನಡೆಸಿದ್ದಾರೆ.[ಆರ್ ಚಂದ್ರು ಅವರ 'ಕನಕ' ಚಿತ್ರದಲ್ಲಿ ಅನಿಲ್-ಉದಯ್.!]
ನಿರ್ದೇಶಕರೇ ಹೇಳುವಂತೆ ಇದು ಡಾ.ರಾಜ್ ಸೇರಿದಂತೆ ಇನ್ನೂ ಹಲವು ಹಿರಿಯ ನಟರಿಗೆ ಗೌರವಾರ್ಪಣೆ ಮಾಡುವ ಸಿನಿಮಾ. ಅಲ್ಲದೆ ಇದು ದುನಿಯಾ ವಿಜಯ್ ಮತ್ತು ಆರ್.ಚಂದ್ರು ಕಾಂಬಿನೇಷನ್ ನ ಮೊದಲ ಚಿತ್ರವಾಗಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಾಗಿದ್ದು ಅದನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.