Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ಮೆಚ್ಚಿದ 'ಗೊಂಬೆ ಹೇಳುತೈತೆ' ಕವರ್ ಸಾಂಗ್ ಇದು
'ರಾಜಕುಮಾರ' ಸಿನಿಮಾದ 'ಗೊಂಬೆ ಹೇಳುತೈತೆ...' ಹಾಡು ಕನ್ನಡಿಗರು ಎಂದಿಗೂ ಮರೆಯದಷ್ಟು ಹತ್ತಿರವಾಗಿ ಬಿಟ್ಟಿದೆ. ಈಗಾಗಲೇ ಈ ಹಾಡಿನ ಅನೇಕ ಕವರ್ ಸಾಂಗ್ ಗಳು ಬಂದಿವೆ. ಆದರೆ ಈಗ ಈ ಹಾಡಿನ ಹೊಸ ರೀತಿಯ ಒಂದು ಕವರ್ ಹಾಡು ಎಲ್ಲೆಡೆ ಸದ್ದು ಮಾಡುತ್ತಿದೆ.
ಈ ಕವರ್ ಹಾಡು ನಿನ್ನೆ ರಿಲೀಸ್ ಆಗಿದ್ದು, ಕಾರ್ಯಕ್ರಮದಲ್ಲಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ನಿರ್ಮಾಪಕಿ ಶೈಲಜಾ ನಾಗ್ ಭಾಗಿಯಾಗಿದ್ದರು. ಜೊತೆಗೆ ಯೂ ಟ್ಯೂಬ್ ನಲ್ಲಿ ಈ ಹಾಡು ಬಿಡುಗಡೆಯಾದ ಒಂದೇ ದಿನದಲ್ಲಿ ಒಂದುವರೆ ಲಕ್ಷಕ್ಕೂ ಹೆಚ್ಚು ಹಿಟ್ಸ್ ಪಡೆದಿದೆ.
ಈ ಕವರ್ ಹಾಡಿನಲ್ಲಿ ಯೋಧರ ತ್ಯಾಗವನ್ನು ಸಾರಿದ್ದಾರೆ. ಯುವ ಕಲಾವಿದರಾದ ನಂದನ್ ಗೌಡ, ಶಶಾಂಕ್ ಶರ್ಮ, ಚೈತ್ರ ಜೆ ಆಚಾರ್ಯ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ನಿತಿನ್ ಕ್ಯಾಮರಾ ಕೈಚಳಕ ತೋರಿಸಿದ್ದು, ಲೋಹಿತ್ ಜಯಣ್ಣ ನಿರ್ದೇಶನ ಮಾಡಿದ್ದಾರೆ.
ಈ ಹಾಡನ್ನು ಯೋಧರಿಗೆ ಮತ್ತು ಡಾ.ರಾಜ್ ಕುಮಾರ್ ಕುಟುಂಬಕ್ಕೆ ಅರ್ಪಿಸಲಾಗಿದೆ. ವಿಶೇಷ ಎಂದರೆ ಹಾಡಿನಲ್ಲಿ ನಟ ಶಿವಣ್ಣ ಕೂಡ ಕಾಣಿಸಿಕೊಂಡಿದ್ದಾರೆ. ಹಾಡಿನ ಮೂಲಕ ದೇಶಪ್ರೇಮವನ್ನು ತೋರಿದ ಈ ಯುವಕರ ತಂಡ ಯೋಧರ ಬಗ್ಗೆ ಅದ್ಭುತವಾಗಿ ಹೇಳಿದ್ದಾರೆ. 'ಗೊಂಬೆ ಹೇಳುತೈತೆ' ಕವರ್ ಸಾಂಗ್ ನೋಡುವುದಕ್ಕೆ ಈ ಲಿಂಕ್ ಕ್ಲಿಕ್ಕಿಸಿ.