Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಖಡಕ್ ಹಳ್ಳಿ ಹುಡುಗರು': ರಾಘವೇಂದ್ರ ರಾಜಕುಮಾರ್ ದನಿಯಲ್ಲಿ ಕನ್ನಡಾಭಿಮಾನದ ಹಾಡು
ರಾಘವೇಂದ್ರ ರಾಜ್ಕುಮಾರ್ ಅವರು ಬಹುದಿನಗಳ ಬಳಿಕ ಹಾಡಿರುವ ಕನ್ನಡಾಭಿಮಾನ ತುಂಬಿದ ಹಾಡೊಂದು ಬಿಡುಗಡೆ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.
'ಖಡಕ್ ಹಳ್ಳಿ ಹುಡುಗರು' ಸಿನಿಮಾದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರು 'ಕನ್ನಡಕೆ ಮೊದಲ ಗೌರವ' ಎಂಬ ಹಾಡೊಂದನ್ನು ಹಾಡಿದ್ದು, ಹಾಡು ಎರಡು ದಿನಗಳ ಹಿಂದೆಯಷ್ಟೆ ಯೂಟ್ಯೂಬ್ನಲ್ಲಿ ಬಿಡುಗಡೆ ಆಗಿದೆ.
ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಿರುವ 'ಖಡಕ್ ಹಳ್ಳಿ ಹುಡುಗರು' ಸಿನಿಮಾಕ್ಕೆ ರಾಘವೇಂದ್ರ ರಾಜ್ಕುಮಾರ್ ಹಾಡಿರುವ ಕನ್ನಡಾಭಿಮಾನದ ಹಾಡು ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
''ನನ್ನ ನೋಡಿದರೆ ಹಳ್ಳಿ ಹುಡುಗನ ತರಹ ಕಾಣುವುದಿಲ್ಲ. ನಿರ್ದೇಶಕರು ನನಗೆ ಹಳ್ಳಿಹುಡುಗನ ಗೆಟಪ್ ಹಾಕಿ ನೋಡಿ ಆಯ್ಕೆ ಮಾಡಿಕೊಂಡರು. ಈಗ ಬಿಡುಗಡೆಯಾಗಿರುವ ಹಾಡು ಇಷ್ಟು ಚೆನ್ನಾಗಿ ಬಂದಿದೆ ಅಂದರೆ ಪುನೀತ್ ಸರ್ ಕಾರಣ. ಅವರ ಸಹಾಯ ಮರೆಯುವ ಹಾಗಿಲ್ಲ'' ಎಂದು ನಾಯಕ ರಾಜೀವ್ ರಾಥೋಡ್ ಹೇಳಿದ್ದಾರೆ.
''ನಾನು ರಾಜೀವ್ ಬಹುದಿನಗಳ ಸ್ನೇಹಿತರು. ಈ ಚಿತ್ರದ ಕಥೆ ಚೆನ್ನಾಗಿದೆ ನೀವು ಒಂದು ಪಾತ್ರ ಮಾಡಬೇಕೆಂದು ಕೇಳಿದ್ದಾರೆ, ನಾನೂ ಸಹ ಸಿನಿಮಾದಲ್ಲಿ ನಟಿಸುತ್ತೇನೆ. ಚಿತ್ರತಂಡಕ್ಕೆ ಶುಭವಾಗಲಿ'' ಎಂದರು ನಟ ಧರ್ಮ.
ಚಿತ್ರದಲ್ಲಿ ಅಭಿನಯಿಸುತ್ತಿರುವ ಪ್ರಭಾಸ್ ರಾಜ್, ಚಂದ್ರಪ್ರಭ, ದೀಪು ವಿಜಯ್, ವರದರಾಜ್, ಉದಯ್, ಮಹಂತೇಶ್, ಆರ್ ಎಂ ಎಂ ಮಂಜು, ನಾಯಕಿಯರಾದ ರಾನ್ವಿ ಶೇಖರ್, ದೀಪ ಈ ಸಮಾರಂಭದಲ್ಲಿ ಹಾಜರಿದ್ದು, ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಿಂಹ ಮತ್ತು ಪುನೀತ್ ಪಟೇಲ್ ಈ ಚಿತ್ರದ ನಿರ್ಮಾಪಕರು. ಸುಧೀರ್ ಶಾಸ್ತ್ರಿ ಹಾಗೂ ಹದಿನಾಲ್ಕು ವರ್ಷದ ಧ್ರುವ ಈ ಚಿತ್ರದ ಸಂಗೀತ ನಿರ್ದೇಶಕರು. ಪಿ.ಎಲ್ ರವಿ ಈ ಚಿತ್ರದ ಛಾಯಾಗ್ರಾಹಕರು.