Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಖಡಕ್ ಹಳ್ಳಿ ಹುಡುಗರು': ರಾಘವೇಂದ್ರ ರಾಜಕುಮಾರ್ ದನಿಯಲ್ಲಿ ಕನ್ನಡಾಭಿಮಾನದ ಹಾಡು
ರಾಘವೇಂದ್ರ ರಾಜ್ಕುಮಾರ್ ಅವರು ಬಹುದಿನಗಳ ಬಳಿಕ ಹಾಡಿರುವ ಕನ್ನಡಾಭಿಮಾನ ತುಂಬಿದ ಹಾಡೊಂದು ಬಿಡುಗಡೆ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.
'ಖಡಕ್ ಹಳ್ಳಿ ಹುಡುಗರು' ಸಿನಿಮಾದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರು 'ಕನ್ನಡಕೆ ಮೊದಲ ಗೌರವ' ಎಂಬ ಹಾಡೊಂದನ್ನು ಹಾಡಿದ್ದು, ಹಾಡು ಎರಡು ದಿನಗಳ ಹಿಂದೆಯಷ್ಟೆ ಯೂಟ್ಯೂಬ್ನಲ್ಲಿ ಬಿಡುಗಡೆ ಆಗಿದೆ.
ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಿರುವ 'ಖಡಕ್ ಹಳ್ಳಿ ಹುಡುಗರು' ಸಿನಿಮಾಕ್ಕೆ ರಾಘವೇಂದ್ರ ರಾಜ್ಕುಮಾರ್ ಹಾಡಿರುವ ಕನ್ನಡಾಭಿಮಾನದ ಹಾಡು ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್ ಹಾಡನ್ನು ಬಿಡುಗಡೆ ಮಾಡಿದರು. ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
''ನನ್ನ ನೋಡಿದರೆ ಹಳ್ಳಿ ಹುಡುಗನ ತರಹ ಕಾಣುವುದಿಲ್ಲ. ನಿರ್ದೇಶಕರು ನನಗೆ ಹಳ್ಳಿಹುಡುಗನ ಗೆಟಪ್ ಹಾಕಿ ನೋಡಿ ಆಯ್ಕೆ ಮಾಡಿಕೊಂಡರು. ಈಗ ಬಿಡುಗಡೆಯಾಗಿರುವ ಹಾಡು ಇಷ್ಟು ಚೆನ್ನಾಗಿ ಬಂದಿದೆ ಅಂದರೆ ಪುನೀತ್ ಸರ್ ಕಾರಣ. ಅವರ ಸಹಾಯ ಮರೆಯುವ ಹಾಗಿಲ್ಲ'' ಎಂದು ನಾಯಕ ರಾಜೀವ್ ರಾಥೋಡ್ ಹೇಳಿದ್ದಾರೆ.
''ನಾನು ರಾಜೀವ್ ಬಹುದಿನಗಳ ಸ್ನೇಹಿತರು. ಈ ಚಿತ್ರದ ಕಥೆ ಚೆನ್ನಾಗಿದೆ ನೀವು ಒಂದು ಪಾತ್ರ ಮಾಡಬೇಕೆಂದು ಕೇಳಿದ್ದಾರೆ, ನಾನೂ ಸಹ ಸಿನಿಮಾದಲ್ಲಿ ನಟಿಸುತ್ತೇನೆ. ಚಿತ್ರತಂಡಕ್ಕೆ ಶುಭವಾಗಲಿ'' ಎಂದರು ನಟ ಧರ್ಮ.
ಚಿತ್ರದಲ್ಲಿ ಅಭಿನಯಿಸುತ್ತಿರುವ ಪ್ರಭಾಸ್ ರಾಜ್, ಚಂದ್ರಪ್ರಭ, ದೀಪು ವಿಜಯ್, ವರದರಾಜ್, ಉದಯ್, ಮಹಂತೇಶ್, ಆರ್ ಎಂ ಎಂ ಮಂಜು, ನಾಯಕಿಯರಾದ ರಾನ್ವಿ ಶೇಖರ್, ದೀಪ ಈ ಸಮಾರಂಭದಲ್ಲಿ ಹಾಜರಿದ್ದು, ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಿಂಹ ಮತ್ತು ಪುನೀತ್ ಪಟೇಲ್ ಈ ಚಿತ್ರದ ನಿರ್ಮಾಪಕರು. ಸುಧೀರ್ ಶಾಸ್ತ್ರಿ ಹಾಗೂ ಹದಿನಾಲ್ಕು ವರ್ಷದ ಧ್ರುವ ಈ ಚಿತ್ರದ ಸಂಗೀತ ನಿರ್ದೇಶಕರು. ಪಿ.ಎಲ್ ರವಿ ಈ ಚಿತ್ರದ ಛಾಯಾಗ್ರಾಹಕರು.