Don't Miss!
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- News ಬಿಜೆಪಿ ತೊರೆದ ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ಯಡಿಯೂರಪ್ಪ ಆಪ್ತ
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಿತ್ ಹೆಗ್ಡೆ ಹೃದಯ ಹದಿನಾರು ಚೂರಾಗಿದೆಯಂತೆ
ಸರಿಗಮಪ ಕಾರ್ಯಕ್ರಮದ ನಂತರ ದೊಡ್ಡ ಜನಪ್ರಿಯತೆ ಗಳಿಸಿರುವ ಯುವ ಗಾಯಕ ಸಂಚಿತ್ ಹೆಗ್ಡೆ ಹೃದಯ ಈಗ ಹದಿನಾರು ಚೂರಾಗಿದೆಯಂತೆ. ಆದರೆ, ರಿಯಲ್ ಆಗಿ ಅಲ್ಲ. ಹಾಡಿನಲ್ಲಿ ಮಾತ್ರ. ಹೌದು, ಸಂಚಿತ್ ಈಗ ಕನ್ನಡದ ಮತ್ತೊಂದು ಹೊಸ ಹಾಡಿಗೆ ಧ್ವನಿ ನೀಡಿದ್ದಾರೆ.
ನಟಿ ಮೇಘನಾ ರಾಜ್ ಅಭಿನಯದ 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾಗೆ ಈಗ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಹಾಡಿಗೆ ಕವಿರಾಜ್ ಸಾಹಿತ್ಯ ಹಾಗೂ ವಿ.ಶ್ರೀಧರ್ ಸಂಭ್ರಮ್ (ವಿ ಎಸ್ ಎಸ್) ಸಂಗೀತ ಇದೆ. 'ಹೃದಯ ಹದಿನಾರು ಚೂರಾಗಿದೆ ನಿನ್ನಿಂದ ಏನ್ ಚಂದ..' ಎಂಬ ಈ ಹಾಡು ಯುವಕ ಯುವತಿಯರನ್ನು ಸೆಳೆಯುವ ಹಾಗಿದೆ. 'ಕಾಲೇಜ್ ಕುಮಾರ್', 'ಚಮಕ್', 'ಟಗರು' ಬಳಿಕ ಮತ್ತೆ ಸಂಚಿತ್ ತಮ್ಮ ಗಾನಯಾನ ಮುಂದುವರೆಸಿದ್ದಾರೆ.
ತಮಿಳು ನಟ ಸಿಂಬುಗೆ ಥ್ಯಾಂಕ್ಸ್ ಹೇಳಿದ ಮೇಘನಾ ರಾಜ್
ಅಂದಹಾಗೆ, ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ಹಾಡುವ ಮೂಲಕ ತಮಿಳು ನಟ ಸಿಂಬು ಮೊದಲ ಬಾರಿಗೆ ಕನ್ನಡಕ್ಕೆ ಕಾಲಿಟ್ಟಿದ್ದಾರೆ.
Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ. ಕಾಂತ ಕನ್ನಲಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಮೇಘನಾ ಜೊತೆಗೆ ತಿಲಕ್ ಸಿನಿಮಾದಲ್ಲಿ ನಟಿಸಿದ್ದಾರೆ.