Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಿತ್ ಹೆಗ್ಡೆ ಹೃದಯ ಹದಿನಾರು ಚೂರಾಗಿದೆಯಂತೆ
ಸರಿಗಮಪ ಕಾರ್ಯಕ್ರಮದ ನಂತರ ದೊಡ್ಡ ಜನಪ್ರಿಯತೆ ಗಳಿಸಿರುವ ಯುವ ಗಾಯಕ ಸಂಚಿತ್ ಹೆಗ್ಡೆ ಹೃದಯ ಈಗ ಹದಿನಾರು ಚೂರಾಗಿದೆಯಂತೆ. ಆದರೆ, ರಿಯಲ್ ಆಗಿ ಅಲ್ಲ. ಹಾಡಿನಲ್ಲಿ ಮಾತ್ರ. ಹೌದು, ಸಂಚಿತ್ ಈಗ ಕನ್ನಡದ ಮತ್ತೊಂದು ಹೊಸ ಹಾಡಿಗೆ ಧ್ವನಿ ನೀಡಿದ್ದಾರೆ.
ನಟಿ ಮೇಘನಾ ರಾಜ್ ಅಭಿನಯದ 'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾಗೆ ಈಗ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಹಾಡಿಗೆ ಕವಿರಾಜ್ ಸಾಹಿತ್ಯ ಹಾಗೂ ವಿ.ಶ್ರೀಧರ್ ಸಂಭ್ರಮ್ (ವಿ ಎಸ್ ಎಸ್) ಸಂಗೀತ ಇದೆ. 'ಹೃದಯ ಹದಿನಾರು ಚೂರಾಗಿದೆ ನಿನ್ನಿಂದ ಏನ್ ಚಂದ..' ಎಂಬ ಈ ಹಾಡು ಯುವಕ ಯುವತಿಯರನ್ನು ಸೆಳೆಯುವ ಹಾಗಿದೆ. 'ಕಾಲೇಜ್ ಕುಮಾರ್', 'ಚಮಕ್', 'ಟಗರು' ಬಳಿಕ ಮತ್ತೆ ಸಂಚಿತ್ ತಮ್ಮ ಗಾನಯಾನ ಮುಂದುವರೆಸಿದ್ದಾರೆ.
ತಮಿಳು ನಟ ಸಿಂಬುಗೆ ಥ್ಯಾಂಕ್ಸ್ ಹೇಳಿದ ಮೇಘನಾ ರಾಜ್
ಅಂದಹಾಗೆ, ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ಹಾಡುವ ಮೂಲಕ ತಮಿಳು ನಟ ಸಿಂಬು ಮೊದಲ ಬಾರಿಗೆ ಕನ್ನಡಕ್ಕೆ ಕಾಲಿಟ್ಟಿದ್ದಾರೆ.
Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ. ಕಾಂತ ಕನ್ನಲಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಮೇಘನಾ ಜೊತೆಗೆ ತಿಲಕ್ ಸಿನಿಮಾದಲ್ಲಿ ನಟಿಸಿದ್ದಾರೆ.