Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಏನು ಸ್ವಾಮಿ ಮಾಡೋಣ..'' ಅಂತ ಕೇಳ್ತಿದ್ದಾರೆ ಪುನೀತ್, ರಿಷಿ
ನಟ ಪುನೀತ್ ರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾದಲ್ಲಿ ನಟ ರಿಷಿ ನಾಯಕನಾಗಿದ್ದರು. ಇದೀಗ ರಿಷಿ ಹೊಸ ಸಿನಿಮಾಗೆ ಪುನೀತ್ ರಾಜ್ ಕುಮಾರ್ ಹಾಡು ಹಾಡಿದ್ದಾರೆ.
'ಸಾರ್ವಜನಿಕರಿಗೆ ಸುವರ್ಣಾವಕಾಶ' ಸಿನಿಮಾದ ವಿಡಿಯೋ ಹಾಡು ಇಂದು ಬಿಡುಗಡೆಯಾಗಿದೆ. ಹಾಡು ಸಿಕ್ಕಾಪಟ್ಟೆ ಮಜಾವಾಗಿದೆ. ಪುನೀತ್ ರಾಜ್ ಕುಮಾರ್ ಧ್ವನಿ ಕಿಕ್ ನೀಡಿದೆ. ಲವ್ ಫೇಲ್ಯೂರ್ ಆದ ರಿಷಿ ಹಾಡುವ ಹಾಡು ಇದಾಗಿದೆ.
ಸಾರ್ವಜನಿಕರಿಗೆ ರಿಷಿ ಚಿತ್ರದಲ್ಲಿ ಅಪ್ಪು ಹಾಡು ಕೇಳುವ ಸುವರ್ಣಾವಕಾಶ
''ಏನು ಸ್ವಾಮಿ ಮಾಡೋಣ.. ಹಾಗೆ ಹೋಯ್ತು ಅದ್ವಾನ...'' ಎಂಬ ಹಾಡನ್ನು ಡಾ ವಿ.ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಅವರ ಪದಗಳು ಕೇಳುಗರಿಗೆ ಮಜಾ ಕೊಡುತ್ತಿವೆ. ಮಿಧುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಹಾಡಿನಲ್ಲಿ ರಿಷಿ ಡ್ಯಾನ್ಸ್ ತುಂಬ ಚೆನ್ನಾಗಿದೆ.
ಲವ್ ಫೇಲ್ಯೂರ್ ಹಾಡಾದರೂ, ಹಾಡಿನಲ್ಲಿ ಒಂದು ಹೊಸತನ ಇದೆ. ಪುನೀತ್ ರಾಜ್ ಕುಮಾರ್ ಧ್ವನಿಯೇ ಹಾಡಿನ ಹೈಲೈಟ್ ಆಗಿದೆ. 'ಸಾರ್ವಜನಿಕರಿಗೆ ಸುವರ್ಣಾವಕಾಶ' ಸಿನಿಮಾದ ಟ್ರೇಲರ್ ಈಗಾಗಲೇ ಹಿಟ್ ಆಗಿದ್ದು, ಹಾಡುಗಳು ಕೂಡ ಗಮನ ಸೆಳೆದಿವೆ.
'ಸಾರ್ವಜನಿಕರಿಗೆ ಸುವರ್ಣಾವಕಾಶ' ಅನೂಪ್ ರಾಮಸ್ವಾಮಿ ನಿರ್ದೇಶನದ ಸಿನಿಮಾ. ದೇವರಾಜ್ ಆರ್, ಪ್ರಶಾಂತ್ ರೆಡ್ಡಿ ಎಸ್ ಮತ್ತು ಜನಾರ್ಥನ್ ಚಿಕ್ಕಣ್ಣ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಧನ್ಯ ಬಾಲಕೃಷ್ಣ ಸಿನಿಮಾದ ನಾಯಕಿಯಾಗಿದ್ದಾರೆ.
''ಏನು ಸ್ವಾಮಿ ಮಾಡೋಣ.. ಹಾಗೆ ಹೋಯ್ತು ಅದ್ವಾನ...'' ಹಾಡು ಆನಂದ್ ಆಡಿಯೋ ಯೂ ಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆ ಆಗುತ್ತಿದೆ.