Don't Miss!
- News Bengaluru Rain: ಬೆಂಗಳೂರಿನಲ್ಲಿ ಮಳೆಗಾಗಿ 146 ದಿನ ಕಾಯಬೇಕು: ಕರ್ನಾಟಕ ಸೇರಿದಂತೆ ಎಲ್ಲೆಲ್ಲಿ ಮಳೆ ಸೂಚನೆ?
- Technology ಅಧಿಕ ಬ್ಯಾಟರಿ ಇರುವ ಈ ಫೋನ್ ಬೆಲೆಯಲ್ಲಿ ಇಳಿಕೆ!..ಆಫರ್ ತಿಳಿದ್ರೆ, ವಾವ್ ಅಂತೀರಾ!
- Automobiles ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
- Finance ರಿಲಯನ್ಸ್ ಪವರ್ ಕಂಪೆನಿಯಲ್ಲಿ ಅನಿಲ್ ಅಂಬಾನಿಯ ಜೆಎಸ್ಡಬ್ಲ್ಯುನಿಂದ 132 ಕೋಟಿ ರೂ.ಗಳ ಹೂಡಿಕೆ
- Sports ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್ಗೆ ಆಯ್ಕೆಯಾಗಬಾರದು; ಇರ್ಫಾನ್ ಪಠಾಣ್ ಹೀಗೆ ಹೇಳಿದ್ದೇಕೆ?
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಏನು ಸ್ವಾಮಿ ಮಾಡೋಣ..'' ಅಂತ ಕೇಳ್ತಿದ್ದಾರೆ ಪುನೀತ್, ರಿಷಿ
ನಟ ಪುನೀತ್ ರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾದಲ್ಲಿ ನಟ ರಿಷಿ ನಾಯಕನಾಗಿದ್ದರು. ಇದೀಗ ರಿಷಿ ಹೊಸ ಸಿನಿಮಾಗೆ ಪುನೀತ್ ರಾಜ್ ಕುಮಾರ್ ಹಾಡು ಹಾಡಿದ್ದಾರೆ.
'ಸಾರ್ವಜನಿಕರಿಗೆ ಸುವರ್ಣಾವಕಾಶ' ಸಿನಿಮಾದ ವಿಡಿಯೋ ಹಾಡು ಇಂದು ಬಿಡುಗಡೆಯಾಗಿದೆ. ಹಾಡು ಸಿಕ್ಕಾಪಟ್ಟೆ ಮಜಾವಾಗಿದೆ. ಪುನೀತ್ ರಾಜ್ ಕುಮಾರ್ ಧ್ವನಿ ಕಿಕ್ ನೀಡಿದೆ. ಲವ್ ಫೇಲ್ಯೂರ್ ಆದ ರಿಷಿ ಹಾಡುವ ಹಾಡು ಇದಾಗಿದೆ.
ಸಾರ್ವಜನಿಕರಿಗೆ ರಿಷಿ ಚಿತ್ರದಲ್ಲಿ ಅಪ್ಪು ಹಾಡು ಕೇಳುವ ಸುವರ್ಣಾವಕಾಶ
''ಏನು ಸ್ವಾಮಿ ಮಾಡೋಣ.. ಹಾಗೆ ಹೋಯ್ತು ಅದ್ವಾನ...'' ಎಂಬ ಹಾಡನ್ನು ಡಾ ವಿ.ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಅವರ ಪದಗಳು ಕೇಳುಗರಿಗೆ ಮಜಾ ಕೊಡುತ್ತಿವೆ. ಮಿಧುನ್ ಮುಕುಂದನ್ ಸಂಗೀತ ನೀಡಿದ್ದಾರೆ. ಹಾಡಿನಲ್ಲಿ ರಿಷಿ ಡ್ಯಾನ್ಸ್ ತುಂಬ ಚೆನ್ನಾಗಿದೆ.
ಲವ್ ಫೇಲ್ಯೂರ್ ಹಾಡಾದರೂ, ಹಾಡಿನಲ್ಲಿ ಒಂದು ಹೊಸತನ ಇದೆ. ಪುನೀತ್ ರಾಜ್ ಕುಮಾರ್ ಧ್ವನಿಯೇ ಹಾಡಿನ ಹೈಲೈಟ್ ಆಗಿದೆ. 'ಸಾರ್ವಜನಿಕರಿಗೆ ಸುವರ್ಣಾವಕಾಶ' ಸಿನಿಮಾದ ಟ್ರೇಲರ್ ಈಗಾಗಲೇ ಹಿಟ್ ಆಗಿದ್ದು, ಹಾಡುಗಳು ಕೂಡ ಗಮನ ಸೆಳೆದಿವೆ.
'ಸಾರ್ವಜನಿಕರಿಗೆ ಸುವರ್ಣಾವಕಾಶ' ಅನೂಪ್ ರಾಮಸ್ವಾಮಿ ನಿರ್ದೇಶನದ ಸಿನಿಮಾ. ದೇವರಾಜ್ ಆರ್, ಪ್ರಶಾಂತ್ ರೆಡ್ಡಿ ಎಸ್ ಮತ್ತು ಜನಾರ್ಥನ್ ಚಿಕ್ಕಣ್ಣ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಧನ್ಯ ಬಾಲಕೃಷ್ಣ ಸಿನಿಮಾದ ನಾಯಕಿಯಾಗಿದ್ದಾರೆ.
''ಏನು ಸ್ವಾಮಿ ಮಾಡೋಣ.. ಹಾಗೆ ಹೋಯ್ತು ಅದ್ವಾನ...'' ಹಾಡು ಆನಂದ್ ಆಡಿಯೋ ಯೂ ಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆ ಆಗುತ್ತಿದೆ.