Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ' ದೀಕ್ಷಾಗೆ ಸಿಕ್ಕಿದೆ ಸಿನಿಮಾದಲ್ಲಿ ಹಾಡುವ ಅವಕಾಶ
Recommended Video
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸರಿಗಮಪ' ಕಾರ್ಯಕ್ರಮದ ಕಳೆದ ಸೀಸನ್ ಸಾಕಷ್ಟು ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿತು. ಅದೇ ಕಾರಣಕ್ಕೆ ಈಗಾಗಲೇ ಸರಿಗಮಪ ಸೀಸನ್ 13 ರಲ್ಲಿ ಭಾಗವಹಿಸಿದ್ದ ಅನೇಕರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿತ್ತು. ಈಗ ಗಾಯಕಿ ದೀಕ್ಷಾ ರಾಮಕೃಷ್ಣ ಕೂಡ ಒಂದು ಸಿನಿಮಾ ಹಾಡನ್ನು ಹಾಡಿದ್ದಾರೆ.
'ಸರ್ಕಾರ್' ಎಂಬ ಹೊಸ ಸಿನಿಮಾದಲ್ಲಿ ದೀಕ್ಷಾ ರಾಮಕೃಷ್ಣ ಒಂದು ಹಾಡನ್ನು ಹಾಡಿದ್ದಾರೆ. ಈ ಚಿತ್ರದ 'ಹೇಳದೆ ಕಾರಣ..' ಎಂಬ ಹಾಡಿಗೆ ದೀಕ್ಷಾ ಧ್ವನಿಯಾಗಿದ್ದಾರೆ. ಇದೊಂದು ಮೆಲೋಡಿ ಹಾಡಾಗಿದ್ದು, ದೀಕ್ಷಾ ಧ್ವನಿಗೆ ಹಾಡು ತುಂಬ ಚೆನ್ನಾಗಿ ಸೂಟ್ ಆಗಿದೆ. ಒಂದು ವಾರದ ಹಿಂದೆ ಈ ಹಾಡು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಸಂಗೀತ ಪ್ರೇಮಿಗಳ ಮೆಚ್ಚುಗೆ ಗಳಿಸಿದೆ. ಸತೀಶ್ ಅರ್ಯನ್ ಸಂಗೀತ ಮತ್ತು ರವೀಂದ್ರ ಮುದ್ದಿ ಸಾಹಿತ್ಯ ಈ ಹಾಡಿನಲ್ಲಿದೆ.
2 ದಿನದಲ್ಲಿ 2 ಸಿನಿಮಾ ಹಾಡು ಹಾಡಿದ ಮೆಹಬೂಬ್ ಸಾಬ್!
ಅಂದಹಾಗೆ, 'ಸರಿಗಮಪ' ಸೀಸನ್ 13 ಕಾರ್ಯಕ್ರಮ ಉಳಿದ ಸ್ಪರ್ಧಿಗಳಾದ ಮೆಹಮೂಬ್ ಸಾಬ್ ಮತ್ತು ಸಂಚಿತ್ ಹೆಗ್ಡೆ ಈಗಾಗಲೇ ಸಿನಿಮಾ ಜರ್ನಿ ಶುರು ಮಾಡಿದ್ದಾರೆ. ಸಂಚಿತ್ ಹೆಗ್ಡೆ 'ಕಾಲೇಜ್ ಕುಮಾರ್', 'ಚಮಕ್', 'ಟಗರು' ಸೇರಿದಂತೆ ಸ್ಟಾರ್ ಸಿನಿಮಾಗಳ ಹಾಡಿಗೆ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ ತಮ್ಮ ಸಂಗೀತ ನಿರ್ದೇಶನದಲ್ಲಿ ಮೆಹಬೂಬ್ ಸಾಬ್ ಮತ್ತು ಸಂಚಿತ್ ಹೆಗ್ಡೆ ಇಬ್ಬರಿಗೆ ಹಾಡುವ ಅವಕಾಶ ನೀಡಿದ್ದರು.