Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ಗಾಯಕ ಕೆಕೆ ಅಂತಿಮ ಸಂಸ್ಕಾರ: ವಿವರ ಇಲ್ಲಿದೆ!
ಕೆಕೆ ಎಂದೇ ಜನಪ್ರಿಯವಾಗಿದ್ದ ಗಾಯಕ ಕೃಷ್ಣಕುಮಾರ್ ಕುನ್ನತ್ ಬದುಕಿನ ಯಾನ ಪೂರ್ಣಗೊಂಡಿದೆ. ಇಂದು ಕೋಲ್ಕತ್ತಾದ ನಜ್ರುಲ್ ಮಂಚ್ನಲ್ಲಿ ಕಾರ್ಯಕ್ರಮ ನೀಡುತ್ತಿದ್ದ ಗಾಯಕ ಕೆಕೆ, ಒಂದು ಗಂಟೆ ಬಳಿಕ ಸಾವನ್ನಪ್ಪಿದ್ದಾರೆ. ಕೆಕೆ ನಿಧನಕ್ಕೆ ಸಂಗೀತ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗಾಯನ ವೇದಿಕೆಯಲ್ಲೇ ಉಸಿರು ನಿಲ್ಲಿಸಿದ್ದನ್ನು ಅಭಿಮಾನಿಗಳು ಸ್ಮರಿಸಿ ಆಘಾತ ಸಂತಾಪ ವ್ಯಕ್ತಪಡಿಸಿದ್ದಾರೆ.
Breaking: ಕೋಲ್ಕತ್ತಾದಲ್ಲಿ ಲೈವ್ ಶೋನಲ್ಲೇ ಗಾಯಕ ಕೆಕೆ ದುರಂತ ಸಾವು
ಕೃಷ್ಣಕುಮಾರ್ ಕುನ್ನತ್ ಅವರ ಅಂತ್ಯಕ್ರಿಯೆ ಇಂದು (ಜೂನ್ 2) ಮುಂಬೈನಲ್ಲಿ ನೆರವೇರಲಿದೆ. ಬುಧವಾರ ಕೋಲ್ಕತ್ತಾದಿಂದ ಪಾರ್ಥಿವ ಶರೀರವನ್ನು ಮುಂಬೈಗೆ ತರಲಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಕೆಕೆ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕೋಲ್ಕತ್ತಾದ ನಜ್ರುಲ್ ಮಂಚದಲ್ಲಿ ಲೈವ್ ಶೋ ನಡೆಯುತ್ತಿತ್ತು. ಅಲ್ಲಿಯೇ ಅಪಘಾತ ಸಂಭವಿಸಿದೆ. ಲೈವ್ ಕಾರ್ಯಕ್ರಮದ ನೀಡಿದ ಬಳಿಕ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ ಅಲಿಯಾಸ್ ಕೆಕೆ ನಿಧನರಾಗಿದ್ದಾರೆ. ಇದು ಕೋಲ್ಕತ್ತಾದಲ್ಲಿ ವಿವೇಕಾನಂದ ಕಾಲೇಜು ಆಯೋಜಿಸಿದ್ದ ಉತ್ಸವವಾಗಿತ್ತು.
ಠಾಕೂರ್ಪುಕೂರ್ ವಿವೇಕಾನಂದ ಕಾಲೇಜು ಆಯೋಜಿಸಿದ್ದ ಉತ್ಸವದಲ್ಲಿ ಕೆಕೆ ಎಂದೇ ಖ್ಯಾತರಾಗಿದ್ದ ಗಾಯಕ ಕೃಷ್ಣಕುಮಾರ್ ಕುನ್ನತ್ ನಿಧನರಾಗಿರುವ ಸುದ್ದಿ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ. ಉಲ್ಟಾ ದಂಗಾ ಗುರುದಾಸ್ ಮಹಾವಿದ್ಯಾಲಯದ ಸಂಗೀತ ಕಾರ್ಯಕ್ರಮದ ಸಮಯದಲ್ಲಿ ಕೆಕೆ ಅಸ್ವಸ್ಥರಾದರು. ಬಳಿಕ ಕೆಕೆ ತಂಗಿದ್ದ ಹೊಟೇಲ್ಗೆ ತೆರಳಿದ ಗಾಯಕ ಅಲ್ಲಿಯೇ ಕುಸಿಬಿದ್ದಿದ್ದರು. ಡೈಮಂಡ್ ಹಾರ್ಬರ್ ರಸ್ತೆ ಬಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತು. ಆದರೆ, ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.