Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಬರ್ಟ್' ನಂತರ ಮತ್ತೊಂದು ದೊಡ್ಡ ಚಿತ್ರದಲ್ಲಿ ಮಂಗ್ಲಿ ಗಾನ
'ರಾಬರ್ಟ್' ಸಿನಿಮಾದ ಸಕ್ಸಸ್ ನಂತರ ತೆಲುಗು ಗಾಯಕಿ ಮಂಗ್ಲಿ ಮತ್ತೆ ಮತ್ತೆ ಕನ್ನಡದಲ್ಲಿ ಹಾಡುಗಳನ್ನು ಹಾಡುತ್ತಿದ್ದಾರೆ. ಇದೀಗ, ಅರ್ಜುನ್ ಜನ್ಯ ಕಂಪೋಸ್ ಮಾಡಿರುವ ಮತ್ತೊಂದು ದೊಡ್ಡ ಪ್ರಾಜೆಕ್ಟ್ನಲ್ಲಿ ಮಂಗ್ಲಿ ಧ್ವನಿಗೂಡಿಸಿದ್ದಾರೆ.
ಪ್ರೇಮ್ ನಿರ್ದೇಶನದಲ್ಲಿ ತಾಯಾರಾಗುತ್ತಿರುವ ಏಕ್ ಲವ್ ಯಾ ಸಿನಿಮಾದ ಹಾಡಿಗೆ ಮಂಗ್ಲಿ ಧ್ವನಿಯಾಗಿದ್ದಾರೆ ಎಂಬ ವಿಷಯ ಹೊರಬಿದ್ದಿದೆ. ಈ ಕುರಿತು ಸ್ವತಃ ಮಂಗ್ಲಿ ಟ್ವಿಟ್ಟರ್ನಲ್ಲಿ ಖುಷಿ ಹಂಚಿಕೊಂಡಿದ್ದಾರೆ.
ಗಾಯಕಿ ಮಂಗ್ಲಿ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಪೊರೇಟರ್
''ಲೆಜೆಂಡರಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಜೊತೆ ಮತ್ತೊಮ್ಮೆ ಕೆಲಸ ಮಾಡಿದ್ದು ಮತ್ತು ಅವರನ್ನು ಭೇಟಿ ಮಾಡಿದ್ದು ಖುಷಿ ಸಂಗತಿ. ಅವರದ್ದು ವಿಶಾಲ ಹೃದಯದ ವ್ಯಕ್ತಿತ್ವ. ಅವರ ಪ್ರಾಜೆಕ್ಟ್ನಲ್ಲಿ ಭಾಗವಾಗಿದ್ದು ನಿಜಕ್ಕೂ ಹೆಮ್ಮೆ ಎನಿಸಿದೆ'' ಎಂದು ಮಂಗ್ಲಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ ಅರ್ಜುನ್ ಜನ್ಯ ಸಹ ಮಂಗ್ಲಿ ಜೊತೆ ಇನ್ನೊಂದು ಹಾಡು ಹಾಡಿಸಿರುವುದಾಗಿ ಖುಷಿ ಹಂಚಿಕೊಂಡಿದ್ದಾರೆ. sಇದಕ್ಕೂ ಮುಂಚೆ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ 'ಕಣ್ಣಾ ಹೊಡೆಯೊಕ' ಹಾಡಿನ ತೆಲುಗು ವರ್ಷನ್ ಮಂಗ್ಲಿ ಹಾಡಿದ್ದರು. ಕನ್ನಡಕ್ಕಿಂತ ಈ ಹಾಡು ತೆಲುಗಿನಲ್ಲಿಯೇ ದೊಡ್ಡ ಹಿಟ್ ಆಗಿತ್ತು.
ಅರ್ಜುನ್ ಜನ್ಯ ಅವರ ಸ್ಟುಡಿಯೋದಲ್ಲಿ ಹಾಡಿನ ರೆಕಾರ್ಡಿಂಗ್ ಮುಗಿದಿದ್ದು, ಈ ವೇಳೆ ನಿರ್ದೇಶಕ ಪ್ರೇಮ್ ಮತ್ತು ನಾಯಕನಟ ರಾಣಾ ಜೊತೆಯಲ್ಲಿದ್ದರು.
'ದಿ ವಿಲನ್' ಸಿನಿಮಾದ ಬಳಿಕ ಪ್ರೇಮ್ ನಿರ್ದೇಶನ ಮಾಡುತ್ತಿರುವ 'ಏಕ್ ಲವ್ ಯಾ' ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದೆ. ರಕ್ಷಿತಾ ಅವರ ಸಹೋದರ ರಾಣಾ ಚೊಚ್ಚ ಬಾರಿಗೆ ನಾಯಕನಟನಾಗಿ ಇಂಡಸ್ಟ್ರಿ ಪ್ರವೇಶಿಸುತ್ತಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಮಂಗ್ಲಿ ವಿರುದ್ಧ ದೂರು
ಇತ್ತೀಚಿಗಷ್ಟೆ ಮಂಗ್ಲಿ ಹಾಡಿದ್ದು ತೆಲುಗು ಜಾನಪದ ಹಾಡೊಂದು ಬಿಡುಗಡೆಯಾಗಿತ್ತು. ಈ ಹಾಡು ವಿವಾದಕ್ಕೆ ಗುರಿಯಾಗಿದೆ. ಈ ಸಂಬಂಧ ಬಿಜೆಪಿ ಕಾರ್ಪೊರೇಟರ್ ದೂರು ಸಹ ದಾಖಲಿಸಿದ್ದರು. ''ಮಂಗ್ಲಿ ಬಿಡುಗಡೆ ಮಾಡಿರುವ ಹಾಡಿನಲ್ಲಿ ಹಿಂದು ದೇವತೆಯನ್ನು ಬೈದಿದ್ದಾರೆ. ಆ ಹಾಡು ಹಿಂದುಗಳ ಭಾವನೆಗೆ ಧಕ್ಕೆ ತರುತ್ತಿದೆ. ಹಾಗಾಗಿ ಈ ಕೂಡಲೇ ಮಂಗ್ಲಿ ವಿರುದ್ಧ ಕ್ರಮ ಕೈಗೊಳ್ಳಬೇಕು'' ಎಂದು ರಚ್ಚಕೊಂಡದ ಮಲ್ಕಜ್ಗಿರಿ ಬಿಜೆಪಿ ಕಾರ್ಪೊರೇಟರ್ ದೂರು ನೀಡಿದ್ದರು.