Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನೋದ್ ಪ್ರಭಾಕರ್ ಚಿತ್ರಕ್ಕಾಗಿ ಬಂದ 'ಬಾಹುಬಲಿ' ಗಾಯಕಿ
'ಬಾಹುಬಲಿ 2' ಸಿನಿಮಾದಲ್ಲಿ ಸಾಕಷ್ಟು ಜನರ ಗಮನ ಸೆಳೆದಿದ್ದ ಹಾಡು ಅನುಷ್ಕಾ ಸಮುದ್ರದ ಮೇಲೆ ನಿಂತು ಹಾಡುವ 'ಒರೆ ಒರು ರಾಜ ವೀರಾದಿ ವೀರ'.. ಕೇವಲ ಟಾಲಿವುಡ್ ಸಿನಿಮಾ ಪ್ರೇಮಿಗಳನ್ನು ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರ ಪ್ರೇಮಿಗಳ ಮನಸ್ಸನ್ನು ಈ ಹಾಡು ಗೆದ್ದಿತ್ತು.
'ಒರೆ ಒರು ರಾಜ ವೀರಾದಿ ವೀರ' ಹಾಡನ್ನು ಹಾಡಿನ ಗಾಯಕಿ ಸೋನಿ ಕಮೋಂಡರಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ವಿನೋದ್ ಪ್ರಭಾಕರ್ ಅಭಿನಯದ 'ರಗಡ್' ಸಿನಿಮಾದ ಒಂದು ಹಾಡನ್ನು ಸೋನಿ ಕಮೋಂಡರಿ ಹಾಡಿದ್ದಾರೆ.
ಮರಿ ಟೈಗರ್ ಗೆ ಸಾಥ್ ನೀಡಿದ ಚಾಲೆಂಜಿಂಗ್ ಸ್ಟಾರ್
ಸಂಗೀತ ನಿರ್ದೇಶಕ ಅಭಿಮಾನ್ ರಾಯ್, ಸೋನಿ ಕಮೋಂಡರಿ ಅವರನ್ನು ಕನ್ನಡಕ್ಕೆ ಕರೆತಂದಿದ್ದು ಇತ್ತೀಚಿಗಷ್ಟೆ ಹಾಡಿನ ರೆಕಾರ್ಡಿಂಗ್ ಕೆಲಸ ಮುಗಿಸಿದ್ದಾರೆ ಸಂಗೀತ ನಿರ್ದೇಶಕರು. ಅರುಣ್ ಕುಮಾರ್ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಮಹೇಶ್ ಗೌಡ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಸಿನಿಮಾ ತಂಡ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿ ಆಗಿದೆ.
ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರದು ರಫ್ ಅಂಡ್ ಟಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಖ್ಯಾತಿ ಪಡೆದುಕೊಂಡಿರುವ ಚೈತ್ರ ರೆಡ್ಡಿ ನಾಯಕಿಯಾಗಿ 'ರಗಡ್' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಇನ್ನು ಖಳನಾಯಕನ ಪಾತ್ರದಲ್ಲಿ ದೀಪಕ್ ಶೆಟ್ಟಿ ಮಿಂಚಿದ್ದಾರೆ.