Just In
Don't Miss!
- News
ಶೌರ್ಯ ಪ್ರಶಸ್ತಿಗೆ ಚಿಕ್ಕಾಸೂ ಬೆಲೆ ನೀಡದ ಕೇರಳ ಸರಕಾರ; ವೃದ್ಧೆಯ ದಶಕಗಳ ಹೋರಾಟ
- Automobiles
ಅನಾವರಣವಾಯ್ತು 2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಎಸ್ ಬೈಕ್
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Education
KSAT Recruitment 2021: 16 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಮಳೆ' ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಆರ್ ಚಂದ್ರು ನಿರ್ಮಾಣದ ಮಳೆ ಚಿತ್ರದ ಹಾಡುಗಳು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸ್ಯಾಂಡಲ್ ವುಡ್ ನಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಚಿತ್ರತಂಡ ಉತ್ಸಾಹಕ್ಕೆ ತಣ್ಣೀರೆರಚಿದಂತಾಗಿತ್ತು.
ಇದೀಗ ಚಿತ್ರದ ಹಾಡುಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆ ವರ್ಣರಂಜಿತ ಕಾರ್ಯಕ್ರಮದಲ್ಲಿ 'ಮಳೆ' ಹಾಡುಗಳು ಲೋಕಾರ್ಪಣೆಗೊಂಡವು. ಸ್ಟೈಲಿಶ್ ಸ್ಟಾರ್ ಪ್ರೇಮ್ ಹಾಗೂ ಅಮೂಲ್ಯಾ ಅವರು ರ್ಯಾಂಪ್ ವಾಕ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿದರು. [ಕಾಣದ ಕೈಗಳ ಚೆಲ್ಲಾಟಕ್ಕೆ 'ಮಳೆ' ಹಾಡುಗಳು ಬಲಿ]
ಇದೇ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕರಾಗಿರುವ ಆರ್ ಚಂದ್ರು ಅವರು ತಮ್ಮ ಹುಟ್ಟುಹಬ್ಬವನ್ನೂ ಆಚರಿಸಿಕೊಂಡರು. ತಾವು ನಡೆದುಬಂದ ಹಾದಿ ಹಾಗೂ ನಿರ್ದೇಶಕನಾಗಿ ಹೆಣಗಾಡಿದ ದಿನಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.
ತಮಗೆ ನಿರ್ದೇಶನದ ಜವಾಬ್ದಾರಿ ಹೊರಿಸಿದ ನಿರ್ಮಾಪಕರನ್ನೂ ಆರ್ ಚಂದ್ರು ಸನ್ಮಾನಿಸಿದರು. ಸ್ಟೈಲಿಶ್ ಸ್ಟಾರ್ ಪ್ರೇಮ್ ಹಾಗೂ ಅಮೂಲ್ಯಾ ಜೋಡಿಯ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ಜೆಸ್ಸಿ ಗಿಫ್ಟ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿವೆ. ಚಿತ್ರ ನಿರ್ಮಾಣದ ಜೊತೆಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಹೊಣೆಯನ್ನು ಆರ್ ಚಂದ್ರು ಅವರೇ ಹೊತ್ತಿದ್ದಾರೆ.
ಇದೊಂದು ಟ್ರಾವೆಲಿಂಗ್ ಸ್ಟೋರಿ. ನವಿರಾದ ಪ್ರೇಮಕಥೆಯನ್ನು ಒಳಗೊಂಡಿದ್ದು ಚಂದ್ರು ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ತೇಜಸ್ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರ. ತೇಜಸ್ ಆತ್ಮೀಯ ಗೆಳೆಯನಾಗಿರುವ ಕಾರಣ ಅವರ ಹೆಗಲಿಗೆ ನಿರ್ದೇಶನದ ಜವಾಬ್ದಾರಿ ಹೊರಿಸಿದ್ದಾರೆ ಚಂದ್ರು. (ಏಜೆನ್ಸೀಸ್)