Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭರವಸೆಯ ಒಂದು ಬೆಳಕು' ಹಾಡಿನ ಮೂಲಕ ಕೋವಿಡ್ ಯೋಧರಿಗೆ ಕೃತಜ್ಞತೆ
ಪ್ರಸ್ತುತ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ದೇಶವೇ ಸಂಕಷ್ಟವನ್ನು ಎದುರಿಸುತ್ತಿದೆ. ಈ ಸಮಯದಲ್ಲಿ ವೈದ್ಯರೊಂದಿಗೆ, ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾಧ್ಯಮ ಹಾಗೂ ಇನ್ನು ಹಲವರು ಸೇವೆ ಸಲ್ಲಿಸುತ್ತಿದ್ದಾರೆ. ಇವರೆಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಸರ್ಕಾರ ಪರಿಗಣಿಸಿದೆ.
ಸಾರ್ವಜನಿಕರ ರಕ್ಷಣೆಗೆ ಯೋಧರಂತೆ ನಿಂತು ಹೋರಾಡುತ್ತಿರುವ ಈ ಸಮೂಹಕ್ಕೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈವೆಂಟ್ ಮ್ಯಾನೇಜರ್ ಹಾಗೂ ಸಿನಿಮಾ ನಿರ್ಮಾಣ ವ್ಯವಸ್ಥಾಪಕ ಸುಶೀಲ್ ಸಾಗರ್ ಹಾಡೊಂದನ್ನು ರಚಿಸಿ ಬಿಡುಗಡೆ ಮಾಡಿದ್ದಾರೆ.
ಮೇ 29 ರಂದು ಸಂಜೆ 6 ಗಂಟೆಗೆ 'ಸಿಟಿ ಸವಾರಿ' ಎನ್ನುವ ಯ್ಯೂಟ್ಯೂಬ್ ಚಾನಲ್ನಲ್ಲಿ 'ಭರವಸೆಯ ಒಂದು ಬೆಳಕು' ಎಂಬ ಹಾಡನ್ನು ರಿಲೀಸ್ ಮಾಡಲಾಗಿದೆ. ಈ ಹಾಡನ್ನು ಸುಶೀಲ್ ಸಾಗರ್ ನಿರ್ದೇಶಿಸಿದ್ದಾರೆ.
ಎಸ್ ರಂಜನಿ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಆಕಾಶ್ ಪರ್ವ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಶ್ವಿನ್ ಶರ್ಮ, ಐಶ್ವರ್ಯ ರಂಗರಾಜನ್ ಹಾಗೂ ಆಶಾ ಭಟ್ ಈ ಹಾಡಿಗೆ ದನಿಯಾಗಿದ್ದಾರೆ. ಹಾಡಿಗೆ ಸ್ಕ್ರಿಪ್ಟ್ ರಕ್ಷಿತ ರಚಿಸಿದ್ದು, ಪುನೀತ್ ಛಾಯಾಗ್ರಹಣವಿದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಎಲ್ಲರೂ ಕೈ ಜೋಡಿಸಿರುವುದಾಗಿ ಸುಶೀಲ್ ಸಾಗರ್ ತಿಳಿಸಿದ್ದಾರೆ.
ಕೊರೊನಾ ವಾರಿಯರ್ಸ್ಗೆ ಕೃತಜ್ಞತೆ ಸಲ್ಲಿಸುವ ಈ ವಿಡಿಯೋ ಹಾಡಿನಲ್ಲಿ ನಟ ವಸಿಷ್ಠ ಸಿಂಹ, ಅನುಪಮ ಗೌಡ, ಶೈನ್ ಶೆಟ್ಟಿ, ರಘು ಗೌಡ, ಹಿತಾ ಚಂದ್ರಶೇಖರ್, ಕಿರಣ್ ಶ್ರೀನಿವಾಸ್ ಹಾಗೂ ಚೈತ್ರಾ ವಾಸುದೇವನ್ ಕಾಣಿಸಿಕೊಂಡಿದ್ದಾರೆ.
ಹಾಡನ್ನು ನೋಡಲು ಈ ಲಿಂಕ್ ಕ್ಲಿಕ್ ಮಾಡಿ