Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಂತ್ ಕಾಯ್ಕಿಣಿ ಬರೆದ 'ಟಗರು' ಚಿತ್ರದ ಗೀತೆ ಬಿಡುಗಡೆ
ಸೂರಿ ನಿರ್ದೇಶನದ ಸಿನಿಮಾಗಳಲ್ಲಿ ಜಯಂತ್ ಕಾಯ್ಕಿಣಿ ಅವರ ಒಂದು ಹಾಡು ಇದ್ದೇ ಇರುತ್ತದೆ. ಈಗ 'ಟಗರು' ಸಿನಿಮಾಗೆ ಕೂಡ ಕಾಯ್ಕಿಣಿ ಒಂದು ಹಾಡನ್ನು ಬರೆದಿದ್ದಾರೆ. 'ಬದುಕಿನ ಬಣ್ಣವೇ..' ಎಂಬ ಹಾಡು ಇದೀಗ ರಿಲೀಸ್ ಆಗಿದೆ.
ನಟ ಶಿವರಾಜ್ ಕುಮಾರ್ ಮತ್ತು ನಟಿ ಭಾವನ ನಡುವೆ ಈ ಹಾಡು ಇದೆ. ಈ ಹಿಂದೆ ಆಡಿಯೋ ರಿಲೀಸ್ ಕಾರ್ಯಕ್ರಮದ ದಿನ ಚಿತ್ರದ ಮೂರು ಹಾಡುಗಳನ್ನು ರಿಲೀಸ್ ಮಾಡಿದ್ದು, ಇದು 'ಟಗರು' ಚಿತ್ರದ ನಾಲ್ಕನೇ ಹಾಡಾಗಿದೆ. ಸಿದ್ಧಾರ್ಥ ಬೆಳಮನು ಈ ಹಾಡನ್ನು ಹಾಡಿದ್ದಾರೆ. ಹಾಡು ಕೇಳುಗರಿಗೆ ಹೊಸ ಫೀಲ್ ನೀಡುತ್ತದೆ. ಸಂಗೀತ ನಿರ್ದೇಶಕ ಚರಣ್ ರಾಜ್ ಹೊಸ ರೀತಿಯ ಮ್ಯೂಸಿಕ್ ಕೊಟ್ಟಿದ್ದಾರೆ.
ಫೆಬ್ರವರಿಗೆ ಶಿಫ್ಟ್ ಆಯ್ತು 'ಟಗರು' ಸಿನಿಮಾದ ರಿಲೀಸ್
ಪುನೀತ್ ರಾಜ್ ಕುಮಾರ್ ಅವರ ಪಿ.ಆರ್.ಕೆ ಆಡಿಯೋ ಸಂಸ್ಥೆಯಿಂದ ಈ ಹಾಡನ್ನು ಹೊರಬಂದಿದೆ. ಈ ಹಿಂದೆ ಬಂದ ಹಾಡುಗಳು ಮಾಸ್ ಪ್ರೇಕ್ಷಕರ ಮನ ತಣಿಸಿತ್ತು. ಈ ಹಾಡು ಮೆಲೋಡಿ ಪ್ರಿಯರಿಗೆ ಇಷ್ಟ ಆಗುವಂತಿದೆ.
ಒಂದು ಕಡೆ 'ಟಗರು' ಸಿನಿಮಾ ಕ್ರೇಜ್ ಜೋರಾಗಿದೆ. ಶಿವಣ್ಣನ ಅಭಿಮಾನಿಗಳು ಸಿನಿಮಾಗಾಗಿ ಕಾಯುತ್ತಿದ್ದಾರೆ. ಮೊದಲು ಡಿಸೆಂಬರ್ ತಿಂಗಳಿನಲ್ಲಿ ರಿಲೀಸ್ ಆಗಬೇಕಿದ್ದ ಈ ಸಿನಿಮಾ ಜನವರಿಗೆ ಮುಂದಕ್ಕೆ ಹೋಗಿತ್ತು. ಆದರೆ ಮತ್ತೆ 'ಟಗರು' ಬಿಡುಗಡೆಯ ದಿನಾಂಕ ಪೋಸ್ಟ್ ಪೋನ್ ಆಗಿದೆ. ಫೆಬ್ರವರಿ 9ಕ್ಕೆ ಸಿನಿಮಾ ರಾಜ್ಯಾದಂತ್ಯ ರಿಲೀಸ್ ಆಗಲಿದೆ.