Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸಬರ ಆಲ್ಬಂ ಹಾಡು ಬಿಡುಗಡೆ ಮಾಡಿ ಹರಸಿದ ಉಪೇಂದ್ರ
ಉತ್ಸಾಹಿ ಯುವ ತಂಡ ಮಾಡಿರುವ ಪ್ರೇಮಗೀತೆಯ ಆಲ್ಬಂ ಹಾಡನ್ನು ನಟ ಉಪೇಂದ್ರ ಅವರು ಬಿಡುಗಡೆ ಮಾಡಿ ತಂಡಕ್ಕೆ ಹರಸಿದ್ದಾರೆ.
'ನಾನು ನಾನು ಪ್ರೀತಿಸುತ್ತಿರುವೆ' ಆಲ್ಬಂ ಹಾಡನ್ನು ಉಪೇಂದ್ರ ಬಿಡುಗಡೆ ಮಾಡಿದ್ದು, 'ಇವಳು ಸುಜಾತ' ಧಾರಾವಾಹಿ, ಕೃಷ್ಣ ತುಳಸಿ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘಶ್ರೀ ಇದೇ ಮೊದಲ ಬಾರಿಗೆ ಆಲ್ಬಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರೇಮ ಕತೆಯುಳ್ಳ ಈ 'ನಾನು ನಾನು ಪ್ರೀತಿಸುತ್ತಿರುವೆ' ಆಲ್ಬಂ ಹಾಡಿನಲ್ಲಿ ಮೇಘಶ್ರೀ ಜೊತೆಗೆ ಹೊಸ ಪ್ರತಿಭೆ ಅರುಣ್ ಚಂದ್ರಪ್ಪ ನಾಯಕರಾಗಿ ನಟಿಸಿದ್ದಾರೆ. ಹಾಡು ಬಿಡುಗಡೆ ಆದ 24 ಗಂಟೆಗಳಲ್ಲಿ 1.5 ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದುಕೊಂಡಿರುವುದು ವಿಶೇಷ.
ಇಡೀ ಹಾಡನ್ನು ಮಂಗಳೂರಿನ ಕಡಲ ತೀರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಸೌಂದರ್ಯಕ್ಕಿಂತ ಪ್ರೀತಿ ಮುಖ್ಯ ಎಂಬ ಸಂದೇಶ ಈ ಹಾಡಿನಲ್ಲಿದೆ. 'ತನಿಖೆ' ಎಂಬ ಚಿತ್ರಕ್ಕೆ ನಿರ್ದೇಶನ ಮಾಡಿರುವ ಜಿ.ಎಸ್. ಕಲಿಗೌಡ ಈ ಹಾಡಿಗೆ ಸಾಹಿತ್ಯ ಬರೆದು ನಿರ್ದೇಶನವನ್ನೂ ಮಾಡಿದ್ದಾರೆ. ಮುರಳಿ ಮಾಸ್ಟರ್, ಹುಸೇನ್ ನೃತ್ಯ ನಿರ್ದೇಶನ ಮಾಡಿದ್ದು, ಕ್ರಿಸ್ಟೋಫರ್ ಜೈಸನ್ ಸಂಗೀತ ನೀಡಿದ್ದಾರೆ. ಛಾಯಾಗ್ರಹಣದ ಹೊಣೆ ಶ್ಯಾಮ್ ಸಿಂಧನೂರು ಅವರದ್ದು.
ಡಿಎಂಎಫ್ (ಡೈಮೆಂಡ್ ಟ್ರೀ ಮ್ಯೂಸಿಕ್ ಫ್ಯಾಕ್ಟರಿ) ಆಡಿಯೋ ಸಂಸ್ಥೆಯ ಮಮತಾ ಶ್ರೀ ಈ ಆಲ್ಬಂ ಸಾಂಗ್ನ ನಿರ್ಮಾಣವನ್ನು ಮಾಡಿದ್ದಾರೆ. 'ಹೊಸಬರಿಗೆ ವೇದಿಕೆ ಕಲ್ಪಿಸಬೇಕೆಂಬ ಉದ್ದೇಶದಿಂದ ಮಾಡಿದ ನಮ್ಮ ಮೊದಲ ಪ್ರಯೋಗಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಪ್ರಯತ್ನದಲ್ಲೇ ಗೆದ್ದಿರುವ ಖುಷಿ ತಂಡಕ್ಕಿದೆ. ತಿಂಗಳಿಗೊಂದು ಆಲ್ಬಂ ಸಾಂಗ್ ಮಾಡಬೇಕೆಂಬ ಕನಸು ಈಗ ಮತ್ತಷ್ಟು ಗಟ್ಟಿಯಾಗಿದೆ. ಹೊಸ ಸಿನಿಮಾದ ಹಾಡುಗಳ ರೈಟ್ಸ್ ಪಡೆದುಕೊಳ್ಳಲು ಡೈಮಂಡ್ ಟ್ರೀ ಮ್ಯೂಸಿಕ್ ಫ್ಯಾಕ್ಟರಿ ಮುಂದಾಗಿದೆ' ಎಂದು ಅವರು ಹೇಳಿದ್ದಾರೆ.