Don't Miss!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಭಕ್ತರಿಗೆ ವಿಶೇಷ ಉಡುಗೊರೆ ನೀಡಿದ ಗಾಯಕಿ ವಾಣಿ ಹರಿಕೃಷ್ಣ
ಇಂದು ದೇಶದಾದ್ಯಂತ ಮಹಾಶಿವರಾತ್ರಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ದೇಶದ ಜನತೆ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಿವನನ್ನು ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಭಜನೆ ಮಾಡುತ್ತ ರಾತ್ರಿಯಲ್ಲ ಜಾಗರಣೆ ಮಾಡುತ್ತಾರೆ. ಈ ವಿಶೇಷ ದಿನದೊಂದು ಕನ್ನಡದ ಖ್ಯಾತ ಗಾಯಕಿ ವಾಣಿ ಹರಿಕೃಷ್ಣ ಶಿವಭಕ್ತರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ಹೌದು, ಶಿವರಾತ್ರಿಯ ವಿಶೇಷವಾಗಿ ಶಿವನ ಬಗ್ಗೆ ಹಾಡೊಂದನ್ನು ಮಾಡಿ ರಿಲೀಸ್ ಮಾಡಿದ್ದಾರೆ ವಾಣಿ ಹರಿಕೃಷ್ಣ. 'ಶಂಕರ ಶಿವ ಶಂಕರ....' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಶಿವಭಕ್ತರ ಗಮನ ಸೆಳೆಯುತ್ತಿದೆ.
ಶಿವನ ಬಗ್ಗೆ ಇರುವ ಈ ಹಾಡನ್ನು ವಾಣಿ ಹರಿಕೃಷ್ಣ ಅವರು ಶ್ರಮ ವಹಿಸಿ ಇಷ್ಟಪಟ್ಟು ಮಾಡಿರುವ ಹಾಡು. ವಾಣಿ ಅವರೆ ಸಾಹಿತ್ಯ ರಚಿಸಿ, ಸಂಗೀತ ಸಂಯೋಜನೆ ಮಾಡಿ, ಧ್ವನಿ ನೀಡಿದ್ದಾರೆ. ವಾಣಿ ಅವರ ಜೊತೆ ಗಾಯಕ ಕೀರ್ತನ್ ಹೊಳ್ಳ ಕೂಡ ಹಾಡಿದ್ದಾರೆ.
ಸರಿಗಮಪ ಶೋ ಮೂಲಕ ಎಲ್ಲರ ಗಮನ ಸೆಳೆದಿದ್ದ ಕೀರ್ತನ್ ಶೋ ವಿನ್ನರ್ ಕೂಡ ಆಗಿದ್ದರು. ವಾಣಿ ಮತ್ತು ಕೀರ್ತನ್ ಕಾಂಬಿನೇಶನ್ ನಲ್ಲಿ ಬಂದ 'ಶಂಕರ ಶಿವ ಶಂಕರ...' ಹಾಡನ್ನು ಡಿ ಬೀಟ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.