Don't Miss!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಪ್ಪಳದಲ್ಲಿ ಮಹತ್ವದ ಕೆಲಸಕ್ಕೆ ಚಾಲನೆ ಕೊಟ್ಟ ಯಶ್-ರಾಧಿಕಾ ದಂಪತಿ
ರಾಕಿಂಗ್ ಸ್ಟಾರ್ ಯಶ್, ಕೇವಲ ಸಿನಿಮಾಗಳಲ್ಲಿ ಮಾತ್ರ ಹೀರೋ ಆಗಿಲ್ಲ. ತೆರೆ ಹಿಂದೆನೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಸದಾ ಸಿನಿಮಾಗಳ ಮೂಲಕ ಜನರಿಗೆ ಮನರಂಜನೆ ನೀಡುವ ಯಶ್, ಇದೀಗ ಸಮಾಜಮುಖಿ ಕೆಲಸಗಳ ಮೂಲಕ ಜನಾಭಿಮಾನ ಗಳಿಸಿಕೊಂಡಿದ್ದಾರೆ.[ಯಾದಗಿರಿ ಅಭಿಮಾನಿಗಳ ಕೋಪಕ್ಕೆ ತುತ್ತಾದ ಯಶ್: ಕಾರಿನ ಗಾಜು ಪುಡಿ ಪುಡಿ]
'ಯಶೋಮಾರ್ಗ ಫೌಂಡೇಶನ್' ಮೂಲಕ ರೈತರಿಗಾಗಿ ಒಳ್ಳೆ ಕೆಲಸಗಳನ್ನ ಮಾಡುತ್ತೇವೆ ಎಂದಿದ್ದ 'ಮಾಸ್ಟರ್ ಪೀಸ್', ಹೇಳಿದಂತೆ ಈಗ ಮಹತ್ತರ ಕಾರ್ಯವೊಂದಕ್ಕೆ ಚಾಲನೆ ಕೊಟ್ಟಿದ್ದು, ಉತ್ತರ ಕರ್ನಾಟಕ ಭಾಗದ ರೈತರಿಗೆ ನೆರವಾಗಿದ್ದಾರೆ. ಈ ಒಳ್ಳೆ ಕೆಲಸಕ್ಕೆ ಪತ್ನಿ ನಟಿ ರಾಧಿಕಾ ಪಂಡಿತ್ ಕೂಡ ಜೊತೆಯಾಗಿರುವುದು ವಿಶೇಷ. ಮುಂದೆ ಓದಿ....
ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ
'ಯಶೋಮಾರ್ಗ ಫೌಂಡೇಶನ್' ಮೂಲಕ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರು ಪೂರೈಕೆ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ ಕೆರೆಗಳನ್ನ ಅಭಿವೃದ್ದಿ ಮಾಡಲು ಮುಂದಾಗಿದ್ದಾರೆ. ಹೀಗಾಗಿ, ತಮ್ಮ ಮೊದಲ ಹೆಜ್ಜೆಯಾಗಿ ಕೊಪ್ಪಳ ಜಿಲ್ಲೆಯ ತಲ್ಲೂರು ಕೆರೆಯನ್ನ ಆಯ್ಕೆ ಮಾಡಿಕೊಂಡಿದ್ದು, ಕೆರೆ ಹೂಳೆತ್ತುವ ಕಾರ್ಯಕ್ಕೆ ರಾಕಿಂಗ್ ಸ್ಟಾರ್ ದಂಪತಿ ಚಾಲನೆ ಕೊಟ್ಟಿದ್ದಾರೆ.[ಯಾದಗಿರಿಯಲ್ಲಿ ನಿನ್ನೆ ಆಗಿದ್ದೇನು.? ನಟ ಯಶ್ ಬಾಯಿಂದ ಬಂದ ತಪ್ಪು-ಒಪ್ಪು]
ಭೂಮಿ ಪೂಜೆ ನೆರೆವೇರಿಸಿದ ಯಶ್-ರಾಧಿಕಾ
ನಟ ಯಶ್ ಅವರು ಹಮ್ಮಿಕೊಂಡಿರುವ ಮಹತ್ತರ ಕಾರ್ಯಕ್ಕೆ ರಾಕಿಂಗ್ ಸ್ಟಾರ್ ದಂಪತಿ ಚಾಲನೆ ಕೊಟ್ಟಿದ್ದು, ಫೆಬ್ರವರಿ 28 ರಂದು, ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೂಮಿ ಪೂಜೆ ನೆರೆವೇರಿಸಿದರು.
'ತಲ್ಲೂರು' ಕೆರೆಯಲ್ಲಿ ಕೆಲಸ ಶುರು
ಯಶ್ ಮತ್ತು ರಾಧಿಕಾ ಪಂಡಿತ್ ಕೆರೆ ಹೂಳೆತ್ತುವ ಕೆಲಸಕ್ಕೆ ಭೂಮಿ ಪೂಜೆ ಮಾಡಿದ ನಂತರ, ಕೆರೆಯಲ್ಲಿ ಕೆಲಸ ಕೂಡ ಶುರುವಾಗಿದೆ. ಜೆಸಿಬಿಗಳು ಕೆರೆ ಅಂಗಳಕ್ಕೆ ಇಳಿದು ಹೂಳೆತ್ತುತ್ತಿವೆ. ಇನ್ನು 'ಯಶೋಮಾರ್ಗ ಫೌಂಡೇಶನ್' ಸಂಸ್ಥೆ ಕೆರೆಯಲ್ಲಿ ಬೀಡುಬಿಟ್ಟಿದ್ದು, ಕಂಪ್ಲೀಟ್ ಕೆಲಸ ಮುಗಿಯುವರೆಗೂ ಅಲ್ಲೆ ಇರಲಿದೆಯಂತೆ.
4 ಕೋಟಿ ವೆಚ್ಚದ ಯೋಜನೆ
ಅಂದ್ಹಾಗೆ, ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲೂಕಿನಲ್ಲಿರುವ ತಲ್ಲೂರು ಕೆರೆ ಯೋಜನೆಗೆ 4 ಕೋಟಿಯನ್ನ ನಟ ಯಶ್ ಮೀಸಲಿಟ್ಟಿದ್ದಾರೆ. ಈ ಯೋಜನೆಯಿಂದ ಸುಮಾರು 40 ಗ್ರಾಮಗಳಿಗೆ ನೀರಿನ ಸಮಸ್ಯೆ ತಪ್ಪುತ್ತೆ. ಜಾನುವಾರುಗಳಿಗೆ ಸಹಾಯವಾಗುತ್ತೆ. ಕೆರೆಯಲ್ಲಿ ಸುಮಾರು 1.5 ಮೀಟರ್ ಹೂಳು ತೆಗೆಯುವುದು, 4000 ಕೋಟಿ ಲೀಟರ್ ನೀರು ಸಂಗ್ರಹ ಮಾಡುವುದು ಯೋಜನೆಯ ಉದ್ದೇಶ.