Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂಡಬಿದ್ರೆಯಲ್ಲಿ ಕೃಷ್ಣನ್ ಮ್ಯಾರೇಜ್ ಸ್ಟೋರಿ
ದಕ್ಷಿಣ ಕನ್ನಡದ ಮೂಡಬಿದ್ರೆಯಲ್ಲಿ 'ಕೃಷ್ಣನ್ ಮ್ಯಾರೇಜ್ ಸ್ಟೋರಿ' ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. "ಈ ಸಂಜೆ ಮಬ್ಬು ರಾತ್ರಿಲ್ಲಿ ಕಂಬ್ಳಿ ದಿಂಬು ನಡುವಲಿ ಇಗೋ ಶುರು ಲವ್ ಖಾಯಿಲೆ..." ಎಂಬ ಗೀತೆಯ ಚಿತ್ರೀಕರಣ ಇದೇ ಊರಿನಲ್ಲಿರುವ ಮಾಜಿ ಶಾಸಕ ಅಮರನಾಥ ಶೆಟ್ಟರ ಮನೆಯಲ್ಲಿ ನಡೆದಿದೆ.
ಈ ನಿವಾಸಕ್ಕೆ ನಾನೂರು ವರ್ಷಗಳ ಇತಿಹಾಸವಿದೆ. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಬರೆದಿರುವ ಈ ಗೀತೆಯ ಚಿತ್ರೀಕರಣದಲ್ಲಿ ಅಜಯ್, ನಿಧಿಸುಬ್ಬಯ್ಯ, ಜೈಜಗದೀಶ್, ಸಂಗೀತ, ವಿನಯಾಪ್ರಸಾದ್, ಬಾಲರಾಜ್, ಸ್ವಯಂವರ ಚಂದ್ರು, ಸುರೇಶ್ಮಂಗಳೂರು, ಜಯಲಕ್ಷ್ಮೀ ಮುಂತಾದವರು ಭಾಗವಹಿಸಿದ್ದರು. ಮದನ್ ಹರಿಣಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.
ದೀಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರದ ನಿರ್ದೇಶಕರು ನೂತನ್ಉಮೇಶ್. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಶೇಖರ್ಚಂದ್ರ ಛಾಯಾಗ್ರಹಣ, ಶ್ರೀ ಸಂಕಲನ, ರವಿವರ್ಮ ಸಾಹಸ, ಮಂಜು ಮಾಂಡವ್ಯ ಸಂಭಾಷಣೆ ಹಾಗೂ ಚಂಪಕಧಾಮ ಬಾಬು ಅವರ ನಿರ್ಮಾಣನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅಜೇಯ್, ನಿಧಿಸುಬ್ಬಯ್ಯ, ಜೈಜಗದೀಶ್, ವಿನಯಾಪ್ರಸಾದ್, ಸಂಗೀತ, ಸುರೇಶ್ಮಂಗಳೂರು, ಬಾಲರಾಜ್, ಜಯಲಕ್ಷ್ಮೀ ಮುಂತಾದವರಿದ್ದಾರೆ.