Don't Miss!
- News ಡಿಸೆಂಬರ್ ಒಳಗೆ ಕಾಂಗ್ರೆಸ್ ಸರ್ಕಾರ ಪತನ: ಎಚ್.ಡಿ.ಕುಮಾರಸ್ವಾಮಿ ನುಡಿದ ಭವಿಷ್ಯ ನಿಜವಾಗಲಿದ್ಯಾ?
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Sports RCB vs KKR: ಚಿನ್ನಸ್ವಾಮಿಯಲ್ಲಿ ಮತ್ತೊಂದು ರೋಚಕ ಪಂದ್ಯ; ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮಿಂಗ್
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂಡಬಿದ್ರೆಯಲ್ಲಿ ಕೃಷ್ಣನ್ ಮ್ಯಾರೇಜ್ ಸ್ಟೋರಿ
ದಕ್ಷಿಣ ಕನ್ನಡದ ಮೂಡಬಿದ್ರೆಯಲ್ಲಿ 'ಕೃಷ್ಣನ್ ಮ್ಯಾರೇಜ್ ಸ್ಟೋರಿ' ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. "ಈ ಸಂಜೆ ಮಬ್ಬು ರಾತ್ರಿಲ್ಲಿ ಕಂಬ್ಳಿ ದಿಂಬು ನಡುವಲಿ ಇಗೋ ಶುರು ಲವ್ ಖಾಯಿಲೆ..." ಎಂಬ ಗೀತೆಯ ಚಿತ್ರೀಕರಣ ಇದೇ ಊರಿನಲ್ಲಿರುವ ಮಾಜಿ ಶಾಸಕ ಅಮರನಾಥ ಶೆಟ್ಟರ ಮನೆಯಲ್ಲಿ ನಡೆದಿದೆ.
ಈ ನಿವಾಸಕ್ಕೆ ನಾನೂರು ವರ್ಷಗಳ ಇತಿಹಾಸವಿದೆ. ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಬರೆದಿರುವ ಈ ಗೀತೆಯ ಚಿತ್ರೀಕರಣದಲ್ಲಿ ಅಜಯ್, ನಿಧಿಸುಬ್ಬಯ್ಯ, ಜೈಜಗದೀಶ್, ಸಂಗೀತ, ವಿನಯಾಪ್ರಸಾದ್, ಬಾಲರಾಜ್, ಸ್ವಯಂವರ ಚಂದ್ರು, ಸುರೇಶ್ಮಂಗಳೂರು, ಜಯಲಕ್ಷ್ಮೀ ಮುಂತಾದವರು ಭಾಗವಹಿಸಿದ್ದರು. ಮದನ್ ಹರಿಣಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.
ದೀಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರದ ನಿರ್ದೇಶಕರು ನೂತನ್ಉಮೇಶ್. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಶೇಖರ್ಚಂದ್ರ ಛಾಯಾಗ್ರಹಣ, ಶ್ರೀ ಸಂಕಲನ, ರವಿವರ್ಮ ಸಾಹಸ, ಮಂಜು ಮಾಂಡವ್ಯ ಸಂಭಾಷಣೆ ಹಾಗೂ ಚಂಪಕಧಾಮ ಬಾಬು ಅವರ ನಿರ್ಮಾಣನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅಜೇಯ್, ನಿಧಿಸುಬ್ಬಯ್ಯ, ಜೈಜಗದೀಶ್, ವಿನಯಾಪ್ರಸಾದ್, ಸಂಗೀತ, ಸುರೇಶ್ಮಂಗಳೂರು, ಬಾಲರಾಜ್, ಜಯಲಕ್ಷ್ಮೀ ಮುಂತಾದವರಿದ್ದಾರೆ.