twitter
    For Quick Alerts
    ALLOW NOTIFICATIONS  
    For Daily Alerts

    ತೆರೆಯ ಮೇಲೆ ಚಿರಂಜೀವಿ ಮತ್ತೆ ತಿಲ್ಲಾನ ತಿಲ್ಲಾನ

    By Rajendra
    |

    ಅಮಿತಾಬ್ ಬಚ್ಚನ್ ಅವರ ಸಲಹೆ ಮೇರೆಗೆ ತೆಲುಗು ನಟ ಮೆಗಾ ಸ್ಟಾರ್ ಚಿರಂಜೀವಿ(55) ಮತ್ತೆ ಅಭಿನಯಿಸುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಅವರು ಚಿತ್ರರಂಗಕ್ಕೆ ನಿವೃತ್ತಿ ಪ್ರಕಟಿಸಿದ್ದರು. ರಾಜಕೀಯದಲ್ಲಿ ಬ್ಯುಸಿಯಾದ ಕಾರಣ ಚಿತ್ರಗಳಲ್ಲಿ ಅಭಿನಯಿಸುವುದು ಕಷ್ಟವಾಗುತ್ತದೆ ಎಂದು ಚಿರು ಹೇಳಿದ್ದರು.

    ಆದರೆ ಬಿಗ್ ಬಿ ಅಮಿತಾಬ್ ಬಚ್ಚನ್ ಚಿತ್ರರಂಗವನ್ನಿ ನೀವು ತ್ವರೆಯಬಾರದು ಎಂದು ವಿನಂತಿಸಿಕೊಂಡರು. ಅವರ ಮಾತಿಗೆ ಬೆಲೆ ಕೊಟ್ಟು ಈಗ ಮತ್ತೆ ಬಣ್ಣ ಹಚ್ಚಿಕೊಳ್ಳುವುದಾಗಿ ಚಿರಂಜೀವಿ ಹೇಳಿದ್ದಾರೆ. ಪುರಿ ಜಗನ್ನಾಥ್ ನಿರ್ದೇಶಿಸಲಿರುವ 150ನೇ ಚಿತ್ರದಲ್ಲಿ ಅಭಿನಯಿಸುವುದಾಗಿ ಚಿರಂಜೀವಿ ಇಂದು ಪ್ರಕಟಿಸಿದರು.

    ಅಮಿತಾಬ್ ಬಚ್ಚನ್ ಮುಖ್ಯಭೂಮಿಕೆಯಲ್ಲಿರುವ 'ಬುಡ್ಡಾ ಹೋಗಯಾ ತೇರಾ ಬಾಪ್' ಚಿತ್ರದ ಪ್ರೀಮಿಯರ್ ಪ್ರದರ್ಶನಲ್ಲಿ ಮಾತನಾಡುತ್ತಿದ್ದರು. ಚಿರಂಜೀವಿ ಅಭಿನಯಿಸಲಿರುವ ಮುಂದಿನ ಚಿತ್ರದಲ್ಲಿ ಅಮಿತಾಬ್ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಅದೇ ವೇದಿಕೆಯಲ್ಲಿದ್ದ ಮತ್ತೊಬ್ಬ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾತನಾಡುತ್ತಾ, ಚಿರಂಜೀವಿ ಎಸ್ ಎಂದರೆ ಅವರ 151ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವುದಾಗಿ ಹೇಳಿದರು. ಇದಕ್ಕೆ ಪ್ರತಿಯಾಗಿ ಚಿರಂಜೀವಿ ಮುಗುಳ್ನಕ್ಕರು.

    "ನನ್ನ ಮುಂದಿನ ಚಿತ್ರವನ್ನು ಪುರಿ ಜಗನ್ನಾಥ್ ನಿರ್ದೇಶಿಸಲಿದ್ದಾರೆ. ನಾನು ಮತ್ತೆ ಅಭಿನಯಕ್ಕೆ ಮರಳುತ್ತಿದ್ದೇನೆ" ಎಂದು ಹೇಳುತ್ತಿದ್ದಂತೆ ಚಿರಂಜೀವಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ವಿಶೇಷ ಅಂದರೆ ಚಿರು 150ನೇ ಚಿತ್ರವನ್ನು ಅವರ ಮಗ ರಾಮ್ ಚರಣ್ ತೇಜ ನಿರ್ಮಿಸುತ್ತಿದ್ದಾರೆ. (ಏಜೆನ್ಸೀಸ್)

    English summary
    Telugu superstar Chiranjeevi has decided not to quit acting following the advice of Amitabh Bachchan.The 55-year-old actor-politician had announced that he was bidding adieu to acting because of his involvement in politics but Bachchan convinced him otherwise.
    Friday, July 1, 2011, 15:04
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X