Don't Miss!
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕನ ನಾಯಕನಾಗಿ ನವೀನ್ ಕೃಷ್ಣ!
ಈ ಹಿಂದೆ 'ಬೆಳ್ಳಿಬೆಟ್ಟ' ಎಂಬ ಚಿತ್ರವನ್ನು ನಿರ್ದೇಶಿಸಿದ ಶಿವರಾಜ್ಹೊಸಕೆರೆ 'ತಾರೆ' ಚಿತ್ರದ ನಿರ್ದೇಶಕರೂ ಕೂಡ. ಶಿವರಾಜ್ ತಮ್ಮ ಮೂರನೇ ಚಿತ್ರಕ್ಕೆ 'ನಿರ್ದೇಶಕ' ಎಂಬ ವಿಶಿಷ್ಟ ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರಕ್ಕೆ ಕತೆ, ಚಿತ್ರಕತೆ ಬರೆದಿರುವ ನಿರ್ದೇಶಕರು ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ. ನಿರ್ದೇಶಕ 'ಆಕರ್ಷಕ' ಕಥಾಹಂದರ ಹೊಂದಿದೆ ಎನ್ನುವ ಶಿವರಾಜ್, ಚಿತ್ರಕ್ಕೆ ನವೀನ್ಕೃಷ್ಣರನ್ನು ನಾಯಕನನ್ನಾಗಿ ಸ್ವಾತಿ ಹಾಗೂ ನವ್ಯಾ ನಾಯಕಿಯರಾಗಿ ಆಯ್ಕೆಮಾಡಿಕೊಂಡಿದ್ದಾರೆ.
ಶ್ರೀಸಿದ್ದಲಿಂಗೇಶ್ವರ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ನಿರ್ದೇಶಕ'ನಿಗೆ ಸದ್ಯದಲ್ಲೇ ಹಾಡುಗಳ ಧ್ವನಿಮುದ್ರಣ ನಡೆಯಲಿದ್ದು ಮುಂಬರುವ ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ವೆಂಕಟ್ ನಾರಾಯಣ್ ಸಂಗೀತ ಸಂಯೋಜಿಸುತ್ತಿರುವ ಈ ಚಿತ್ರಕ್ಕೆ ರೇಣುಕುಮಾರ್ ಅವರ ಛಾಯಾಗ್ರಹಣವಿದೆ. ಬಸವರಾಜ್ ಅರಸ್ ಸಂಕಲನ, ರುದ್ರೇಶ್ನಾಗಸಂದ್ರ ಸಂಭಾಷಣೆ, ಡಿಫ಼ರೆಂಟ್ಡ್ಯಾನಿ, ಜಂಪರ್ ರವಿ ಸಾಹಸ, ದೇವಸಂಪತ್, ನಟರಾಜ್ ನೃತ್ಯ, ಡಿ.ರಮೇಶ್ ಅವರ ನಿರ್ಮಾಣನಿರ್ವಹಣೆಯಿರುವ 'ನಿರ್ದೇಶಕ'ನಿಗೆ ಉಳಿದ ತಾರಾಗಣದ ಆಯ್ಕೆ ನಡೆಯುತ್ತಿದೆ.
(ದಟ್ಸ್ ಕನ್ನಡಚಿತ್ರವಾರ್ತೆ)