Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಶಸ್ತಿ ಜವಾಬ್ದಾರಿಯನ್ನು ಹೆಚ್ಚಿಸಿದೆ; ಕ್ರೇಜಿಸ್ಟಾರ್
ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರಿಗೆ ಕೊನೆ ಗಳಿಕೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರಕಾರ ಅಚ್ಚರಿ ಮೂಡಿಸಿದೆ. ಈಗಾಗಲೆ 2010ರ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ 162 ಮಂದಿಗೆ ಸ್ಥಾನ ಸಿಕ್ಕಿದೆ. ಭಾನುವಾರ (ಅ.31) ಚಿತ್ರಣ ಬದಲಾಗಿದ್ದು ರವಿ ಸೇರಿದಂತೆ 12 ಮಂದಿಗೆ ಪ್ರಶಸ್ತಿ ನೀಡುವ ಮೂಲಕ ಪಟ್ಟಿ ಇನ್ನಷ್ಟು ಉದ್ದವಾಗಿದೆ.
ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ರವಿ ಮಾತನಾಡುತ್ತಾ, ಮಲಗಿದ್ದವನನ್ನು ಎಬ್ಬಿಸಿ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ ಎಂದರು. ಪ್ರಶಸ್ತಿಯನ್ನು ನಾನು ನಿರೀಕ್ಷಿಸಿರಲಿಲ್ಲ. ರಾಜ್ಯ ಸರಕಾರ ಕೊನೆ ಗಳಿಗೆಯಲ್ಲಿ ಪ್ರಶಸ್ತಿ ನೀಡಿ ಚಕಿತಗೊಳಿಸಿದೆ ಎಂದರು. ರವಿಚಂದ್ರನ್ ಮನೆಯಲ್ಲಿ ಈಗ ಸಂಭ್ರಮದ ವಾತಾವಾರಣ ನೆಲೆಗೊಂಡಿದೆ.
ಪ್ರಶಸ್ತಿಯು ಜವಾಬ್ದಾರಿಯನ್ನು ಹೆಚ್ಚಿಸಿದೆ. ಖಂಡಿತವಾಗಿಯೂ ಮುಂದೆ ಇನ್ನೂ ಉತ್ತಮ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುತ್ತೇನೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಸದ್ಯಕ್ಕೆ 'ನಾರಿಯ ಸೀರೆ ಕದ್ದ' ಚಿತ್ರೀಕರಣದಲ್ಲಿ ರವಿಚಂದ್ರನ್ ಬಿಜಿಯಾಗಿದ್ದಾರೆ. ಅವರ ಮಹತ್ವಾಕಾಂಕ್ಷಿ 'ಮಂಜಿನಹನಿ' ಚಿತ್ರಕ್ಕೆ ಇನ್ನೂ ಮಂಜು ಕರಗಿ ಹನಿಯಾಗುವ ಸೌಭಾಗ್ಯ ಸಿಕ್ಕಿಲ್ಲ. ಮಲ್ಲಿಕಾರ್ಜುನ, ಹ್ಯಾಪಿ ಹಸ್ಪೆಂಡ್, ಕೀಚಕ ಚಿತ್ರಗಳು ನಿರ್ಮಾಣ ಹಂತದಲ್ಲಿವೆ. ರವಿಚಂದ್ರನ್ ಅವರಿಗೆ ಶುಭಾಶಯಗಳು.