Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಶಸ್ತಿ ಜವಾಬ್ದಾರಿಯನ್ನು ಹೆಚ್ಚಿಸಿದೆ; ಕ್ರೇಜಿಸ್ಟಾರ್
ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರಿಗೆ ಕೊನೆ ಗಳಿಕೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರಕಾರ ಅಚ್ಚರಿ ಮೂಡಿಸಿದೆ. ಈಗಾಗಲೆ 2010ರ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ 162 ಮಂದಿಗೆ ಸ್ಥಾನ ಸಿಕ್ಕಿದೆ. ಭಾನುವಾರ (ಅ.31) ಚಿತ್ರಣ ಬದಲಾಗಿದ್ದು ರವಿ ಸೇರಿದಂತೆ 12 ಮಂದಿಗೆ ಪ್ರಶಸ್ತಿ ನೀಡುವ ಮೂಲಕ ಪಟ್ಟಿ ಇನ್ನಷ್ಟು ಉದ್ದವಾಗಿದೆ.
ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ರವಿ ಮಾತನಾಡುತ್ತಾ, ಮಲಗಿದ್ದವನನ್ನು ಎಬ್ಬಿಸಿ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ ಎಂದರು. ಪ್ರಶಸ್ತಿಯನ್ನು ನಾನು ನಿರೀಕ್ಷಿಸಿರಲಿಲ್ಲ. ರಾಜ್ಯ ಸರಕಾರ ಕೊನೆ ಗಳಿಗೆಯಲ್ಲಿ ಪ್ರಶಸ್ತಿ ನೀಡಿ ಚಕಿತಗೊಳಿಸಿದೆ ಎಂದರು. ರವಿಚಂದ್ರನ್ ಮನೆಯಲ್ಲಿ ಈಗ ಸಂಭ್ರಮದ ವಾತಾವಾರಣ ನೆಲೆಗೊಂಡಿದೆ.
ಪ್ರಶಸ್ತಿಯು ಜವಾಬ್ದಾರಿಯನ್ನು ಹೆಚ್ಚಿಸಿದೆ. ಖಂಡಿತವಾಗಿಯೂ ಮುಂದೆ ಇನ್ನೂ ಉತ್ತಮ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುತ್ತೇನೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಸದ್ಯಕ್ಕೆ 'ನಾರಿಯ ಸೀರೆ ಕದ್ದ' ಚಿತ್ರೀಕರಣದಲ್ಲಿ ರವಿಚಂದ್ರನ್ ಬಿಜಿಯಾಗಿದ್ದಾರೆ. ಅವರ ಮಹತ್ವಾಕಾಂಕ್ಷಿ 'ಮಂಜಿನಹನಿ' ಚಿತ್ರಕ್ಕೆ ಇನ್ನೂ ಮಂಜು ಕರಗಿ ಹನಿಯಾಗುವ ಸೌಭಾಗ್ಯ ಸಿಕ್ಕಿಲ್ಲ. ಮಲ್ಲಿಕಾರ್ಜುನ, ಹ್ಯಾಪಿ ಹಸ್ಪೆಂಡ್, ಕೀಚಕ ಚಿತ್ರಗಳು ನಿರ್ಮಾಣ ಹಂತದಲ್ಲಿವೆ. ರವಿಚಂದ್ರನ್ ಅವರಿಗೆ ಶುಭಾಶಯಗಳು.