Don't Miss!
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್ ಬಗ್ಗೆ ಭಾರತದ ಮಾಜಿ ಆಟಗಾರರ ಅಭಿಪ್ರಾಯ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- News ಧಾರವಾಡ; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್, ಕಣದಲ್ಲಿ 17 ಮಂದಿ
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಶರ್ಮಿಳಾ ಮಾಂಡ್ರೆ ಸ್ವಯಂವರ!
ನಟಿ ಶರ್ಮಿಳಾ ಮಾಂಡ್ರೆ 'ಸ್ವಯಂವರ'ಕ್ಕೆ ತಯಾರಿ ನಡೆಸುತ್ತಿದ್ದಾರೆ! ಕೊರಳಿಗೆ ಹಾರ ಹಾಕಿಸಿಕೊಳ್ಳಲು ಇಬ್ಬರು ವರರಾದ ಶ್ರೀನಗರ ಕಿಟ್ಟಿ ಹಾಗೂ ದಿಗಂತ್ ಸಿದ್ಧರಾಗಿದ್ದಾರೆ. ಆದರೆ ಅವರು ಹೀಗೆ ತಯಾರಿ ಮಾಡಿಕೊಳ್ಳುತ್ತಿರುವುದು ರಿಯಾಲಿಟಿ ಕಾರ್ಯಕ್ರಮಕ್ಕಲ್ಲ 'ಸ್ವಯಂವರ' ಎಂಬ ಚಿತ್ರಕ್ಕೆ!
ಶ್ರೀ ಸಾಯಿ ಕಂಬೈನ್ಸ್ ಲಾಂಛನದಲ್ಲಿ ಎಂ.ಚಂದ್ರು ಅವರು ನಿರ್ಮಿಸುತ್ತಿರುವ 'ಸ್ವಯಂವರ' ಚಿತ್ರದ ಹಾಡುಗಳು ರೇಣು ಸ್ಟೂಡಿಯೋದಲ್ಲಿ ಧ್ವನಿಮುದ್ರಣಗೊಂಡಿದೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸುತ್ತಿರುವ ಈ ಚಿತ್ರದಲ್ಲಿ ಐದು ಹಾಡುಗಳಿವೆ. ಕನ್ನಡದ ಐದು ನಿರ್ದೇಶಕರು ಐದು ಗೀತೆಗಳನ್ನು ಬರೆದಿರುವುದು 'ಸ್ವಯಂವರ'ದ ವಿಶೇಷ. ಪ್ರೇಂ, ಯೋಗರಾಜ್ಭಟ್, ವಿ.ನಾಗೇಂದ್ರಪ್ರಸಾದ್. ತುಷಾರ ರಂಗನಾಥ್ ಹಾಗೂ ಎ.ಪಿ.ಅರ್ಜುನ್ ಈ ಚಿತ್ರಕ್ಕೆ ಗೀತರಚನೆ ಮಾಡಿರುವ ನಿರ್ದೇಶಕರು.
ಖ್ಯಾತನಾಮರ ಬಳಿ ಸಹಾಯಕರಾಗಿ ಕಾರ್ಯ ನಿರ್ವಹಿಸಿ, 'ಮಸ್ತ್ ಮಜಾ ಮಾಡಿ' ಚಿತ್ರದ ಮೂಲಕ ಸ್ವತಂತ್ರ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ ಅನಂತರಾಜು ಈ ಚಿತ್ರದ ನಿರ್ದೇಶಕರು. ಈಗಾಗಲೇ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ಇವರು 'ಸ್ವಯಂವರ' ಉತ್ತಮ ಕಥಾಹಂದರವನ್ನು ಹೊಂದಿರುವ ಚಿತ್ರ ಎಂದು ತಿಳಿಸಿದ್ದಾರೆ.
ಸೆಪ್ಟಂಬರ್ 2ರಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ 45ದಿನಗಳ ಚಿತ್ರೀಕರಣ ನಡೆಯಲಿದೆ. ನಿರ್ದೇಶಕರೇ ಚಿತ್ರಕಥೆ ಬರೆದಿರುವ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ದಿಗಂತ್ ನಾಯಕರಾಗಿ ನಟಿಸುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ ನಾಯಕಿಯಾಗಿ ಅಭಿನಯಿಸುತ್ತಿರುವ 'ಸ್ವಯಂವರ'ದ ಉಳಿದ ತಾರಾಬಳಗದಲ್ಲಿ ತಾರಾ, ಓಂಪ್ರಕಾಶ್ರಾವ್, ಅರುಣ್ಸಾಗರ್ ಮುಂತಾದವರಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ತುಷಾರರಂಗನಾಥ್ ಸಂಭಾಷಣೆ, ಹರ್ಷ ನೃತ್ಯ ಹಾಗೂ ಪಳನಿರಾಜ್ ಅವರ ಸಾಹಸ ಈ ನೂತನ ಚಿತ್ರಕ್ಕಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)